Just In
- 7 min ago Qubo InstaView ವಿಡಿಯೋ ಡೋರ್ ಫೋನ್ ಲಾಂಚ್!..ಬೆಲೆ ಎಷ್ಟು, ಫೀಚರ್ಸ್ ಏನಿವೆ?
- 43 min ago Jio: ಅಗ್ಗದ ಜಿಯೋ ಸಿನಿಮಾ ಪ್ರೀಮಿಯಂ ಚಂದಾದಾರಿಕೆ ಘೋಷಣೆ! 29 ರೂ.ಗಳಿಂದ ಪ್ರಾರಂಭ..
- 1 hr ago HMD ಪಲ್ಸ್ ಸರಣಿ ಅಡಿಯಲ್ಲಿ 3 ಹೊಸ ಸ್ಮಾರ್ಟ್ಫೋನ್ ಲಾಂಚ್! ಫೀಚರ್ಸ್ ಏನಿವೆ?
- 2 hrs ago ಇಂದು 3D ಕರ್ವ್ಡ್ ಡಿಸ್ಪ್ಲೇ ಇರುವ ಈ ಫೋನಿನ ಸೇಲ್!..ಆಫರ್ ಬೆಲೆ ಎಷ್ಟು?
Don't Miss
- News ಡಿಕೆ ಸುರೇಶ್ ಆಪ್ತರಿಗೆ ಐಟಿ ಶಾಕ್; ಬಿಜೆಪಿ ದುಡ್ಡು ಹಂಚುತ್ತಿರುವುದು ಗೊತ್ತಿಲ್ಲವೆ? : ಡಿ ಕೆ ಶಿವಕುಮಾರ್ ಹೇಳಿದ್ದೇನು?
- Automobiles ಭರ್ಜರಿ ಸಿಹಿಸುದ್ದಿ: ಸ್ಕೋಡಾ ಕೊಡಿಯಾಕ್ ಎಸ್ಯುವಿಯ ಮೇಲೆ ಭರ್ಜರಿ ಡಿಸ್ಕೌಂಟ್
- Finance Bengaluru Suburban Rail Project: ದೊಡ್ಡಜಾಲದಿಂದ ಬೆಂಗಳೂರು ವಿಮಾನ ನಿಲ್ದಾಣಕ್ಕೆ ರೈಲು ಸಂಪರ್ಕ, ವಿವರ
- Lifestyle ಖುಲಾಯಿಸಿತು ಅದೃಷ್ಟ: ಫ್ಯಾಂಟಸಿ ಗೇಮ್ನಲ್ಲಿ ₹1.5 ಕೋಟಿ ಗೆದ್ದ ಮೆಕ್ಯಾನಿಕ್..!
- Movies ತಮನ್ನಾ ಪಾಲಿಗೆ 'ದುಬಾರಿ' ಆಯಿತು 'ಪ್ರಚಾರ' ; ಮಿಲ್ಕಿ ಬ್ಯೂಟಿಯನ್ನ ವಿಚಾರಣೆಗೆ ಕರೆದ ಸೈಬರ್ ಇಲಾಖೆ..!
- Sports IPL 2024: ಸಿಕ್ಸ್ ಹೊಡೆದು ತಪ್ಪಾಯ್ತು ಎಂದಿದ್ದೇಕೆ ರಿಷಬ್ ಪಂತ್ ?
- Education ವರ್ಧಿತ ಉತ್ಪಾದಕತೆಗಾಗಿ ಪ್ರತಿಯೊಬ್ಬರೂ ಕಲಿಯಬೇಕಾದ 10 ಅಗತ್ಯ ಕೌಶಲ್ಯಗಳು
- Travel Bengaluru to Ayodhya: ಬೆಂಗಳೂರಿನಿಂದ ಅಯೋಧ್ಯೆ ತಲುಪುವುದು ಹೇಗೆ? ನೀವಲ್ಲಿ ನೋಡಲೇಬೇಕಿರುವ ಸ್ಥಳಗಳು ಯಾವವು? ಮಾಹಿತಿ
ಪ್ರೇಮಿಗಳ ದುರಂತಮಯ ಅಂತ್ಯಕ್ಕೆ ಕಾರಣವಾಯಿತಾ ವಾಟ್ಸ್ಆಪ್..?
ಮಾಹಿತಿ ಮತ್ತು ಮನರಂಜನೆಗಾಗಿ ಬಳಸುವ ಸಾಮಾಜಿಕ ಮಾಧ್ಯಮ ಜನಗಳಿಗೆ ವ್ಯಸನವಾಗುತ್ತಿದೆ. ವಿಶೇಷವಾಗಿ ಯುವಕರು ವಾಟ್ಸ್ಆಪ್, ಫೇಸ್ಬುಕ್ಗೆ ವ್ಯಸನಿಗಳಾಗುತ್ತಿದ್ದಾರೆ. ವಾಟ್ಸ್ಆಪ್, ಫೇಸ್ ಬುಕ್ ಚಾಟಿಂಗ್ನಲ್ಲಿ ಮುಳುಗಿ ಜಗತ್ತನ್ನೇ ಮರೆಯುತ್ತಿರುವ ಯುವಜನ ಕೊನೆಗೆ ಸಾಮಾಜಿಕ ಮಾಧ್ಯಮಗಳ ಕಾರಣದಿಂದಲೇ ದುರಂತ ಅಂತ್ಯ ಕಾಣುತ್ತಿರುವುದು ಬಹಳ ಆತಂಕಕಾರಿಯಾಗಿದೆ.
ಹೌದು, ಎರಡು ದಿನಗಳ ಹಿಂದೆ ಸಿಕಂದರಾಬಾದ್ನ ಮರೇಡೆಪ್ಪಲ್ಲಿಯಲ್ಲಿ ವಾಟ್ಸ್ಆಪ್ ಚಾಟಿಂಗ್ ಇಬ್ಬರ ಸಾವಿಗೆ ಕಾರಣವಾಗಿರುವುದು ಸಾಮಾಜಿಕ ಮಾಧ್ಯಮಗಳ ವ್ಯಸನಕ್ಕೀಡಿದ ಕನ್ನಡಿಯಾಗಿದೆ. ಶಿವಕುಮಾರ್ (27) ಮತ್ತು ವೆನಿಲ್ಲಾ (19) ವಾಟ್ಸ್ಆಪ್ ಚಾಟಿಂಗ್ನಿಂದ ತಮ್ಮ ಪ್ರಾಣ ಕಳೆದುಕೊಂಡಿರುವ ದುರ್ದೈವಿಗಳು. ಆದರೆ, ಇವರ ಸಾವಿಗೆ ವಾಟ್ಸ್ಆಪ್ ಯಾವ ರೀತಿ ಕಾರಣವಾಯಿತು. ಸಾವಿನ ಹಿಂದೆ ಸಾಮಾಜಿಕ ಮಾಧ್ಯಮದ ಕೈ ಹೇಗೆ ಕೆಲಸ ಮಾಡಿದೆ ಎಂಬುದನ್ನು ಮುಂದೆ ನೋಡಿ.
ವಾಟ್ಸ್ಆಪ್ ಚಾಟಿಂಗ್
ಸಿಕಂದರಾಬಾದ್ನ ಮರುಡುಪಲ್ಲಿಯ ವಾಲ್ಮೀಕಿನಗರದಲ್ಲಿ ಇಬ್ಬರು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಆತ್ಮಹತ್ಯೆ ಮಾಡಿಕೊಂಡ ಇಬ್ಬರು ಬಹಳ ದಿನಗಳಿಂದ ವಾಟ್ಸ್ಆಪ್ ಚಾಟಿಂಗ್ನಲ್ಲಿ ನಿರತರಾಗಿದ್ದರು ಎಂದು ಪೊಲೀಸರು ತಿಳಿಸಿದ್ದಾರೆ. ಈಗ ಅದೇ ವಾಟ್ಸ್ಆಪ್ ಚಾಟಿಂಗ್ ಸಾವಿಗೆ ಕಾರಣವಾಗಿದ್ದು, ಎರಡು ಕುಟುಂಬಗಳ ನಡುವೆ ವಿವಾದಕ್ಕೆ ಕಾರಣವಾಗಿದೆ.
ತಿಂಗಳ ಹಿಂದೆ ಸಪ್ತಪದಿ ತುಳಿದಿದ್ದ ಶಿವಕುಮಾರ್
ಆತ್ಮಹತ್ಯೆ ಮಾಡಿಕೊಂಡಿರುವ ಶಿವಕುಮಾರ್ಗೆ ಲಹರಿ ಎಂಬ ಹುಡುಗಿ ಜತೆ ತಿಂಗಳ ಹಿಂದೆ ಮದುವೆಯಾಗಿತ್ತು. ಆದರೆ,ಶಿವಕುಮಾರ್ ತನ್ನ ಪಕ್ಕದ ಮನೆಯಲ್ಲಿದ್ದ ಬಾಲ್ಯದ ಗೆಳತಿ ವೆನಿಲ್ಲಾ ಎಂಬ ಹುಡುಗಿ ಜತೆ ವಾಟ್ಸ್ಆಪ್ ಚಾಟ್ ಮಾಡುತ್ತಿದ್ದ. ಈ ಬಗ್ಗೆ ಶಿವಕುಮಾರನ ಪತ್ನಿ ಲಹರಿ ತನ್ನ ಕುಟುಂಬಕ್ಕೆ ತಿಳಿಸಿದಾಗ ಶಿವಕುಮಾರ್ ಮನನೊಂದು ಆತ್ಮಹತ್ಯೆ ಮಾಡಿಕೊಂಡಿದ್ದಾನೆ.
ಪ್ರಿಯತಮನ ಸಾವಿನಿಂದ ಕಂಗೆಟ್ಟ ವೆನೆಲ್ಲಾ ಆತ್ಮಹತ್ಯೆ
ಶಿವಕುಮಾರ ಆತ್ಮಹತ್ಯೆ ಮಾಡಿಕೊಂಡ ದಿನದಂದು ಸಂಜೆ ಕಂಗೆಟ್ಟಿದ್ದ ವೆನೆಲ್ಲಾ ಆತ್ಮಹತ್ಯೆ ಮಾಡಿಕೊಂಡಿದ್ದಾಳೆ. ಕುಟುಂಬದ ಸದಸ್ಯರು ವೆನೆಲ್ಲಾಳನ್ನು ಗಾಂಧಿ ಆಸ್ಪತ್ರೆಗೆ ಕರೆದೊಯ್ದು ಚಿಕಿತ್ಸೆ ಕೊಡಿಸಿದರು, ಚಿಕಿತ್ಸೆ ಫಲಕಾರಿಯಾಗದೆ ಭಾನುವಾರ ಆಸ್ಪತ್ರೆಯಲ್ಲಿ ಕೊನೆಯುಸಿರೆಳೆದಿದ್ದಾಳೆ.
ಪ್ರಕರಣ ದಾಖಲು
ಒಟ್ಟಿನಲ್ಲಿ ವಾಟ್ಸ್ಆಪ್ ಚಾಟಿಂಗ್ ವಿಷಯಕ್ಕಾಗಿಯೇ ಪ್ರೇಮಿಗಳ ದುರ್ಮರಣವಾಗಿರುವುದಂತು ದುರಂತಮಯ. ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದು, ತನಿಖೆಯನ್ನು ಮುಂದುವರೆಸಿದ್ದಾರೆ.
-
1,29,999
-
22,999
-
64,999
-
99,999
-
29,999
-
39,999
-
-
63,999
-
1,56,900
-
96,949
-
1,39,900
-
1,29,900
-
79,900
-
65,900
-
12,999
-
96,949
-
16,499
-
38,999
-
30,700
-
49,999
-
19,999
-
17,970
-
21,999
-
13,474
-
18,999
-
22,999
-
19,999
-
17,999
-
26,999
-
5,999