Just In
- 6 min ago Apple: ಆಪಲ್ಗೆ ದೊಡ್ಡ ಮಟ್ಟದ ಸಂಕಷ್ಟ! ಒಂದೇ ದಿನದಲ್ಲಿ 113 ಬಿಲಿಯನ್ ಡಾಲರ್ ನಷ್ಟ.. ಯಾಕೆ ಗೊತ್ತಾ?
- 1 hr ago ಇಂದು ಗೆಸ್ಚರ್ ಸೌಲಭ್ಯ ಇರುವ ಈ ಫೋನ್ ಖರೀದಿಗೆ ಲಭ್ಯ!..ಉಚಿತ ಆಫರ್ ಸಹ ಇದೆ!
- 3 hrs ago Vivo: ವಿವೋದ ಈ ಫೋನ್ಗೆ 34% ರಿಯಾಯಿತಿ! 128 GB ಸ್ಟೋರೇಜ್.. 64MP ಕ್ಯಾಮೆರಾ
- 17 hrs ago Xiaomi: ಶಿಯೋಮಿ ಸಿವಿ 4 ಪ್ರೊ ಸ್ಮಾರ್ಟ್ಫೋನ್ ಲಾಂಚ್! ಡ್ಯುಯಲ್ 32MP ಸೆಲ್ಫಿ ಕ್ಯಾಮೆರಾ, 16GB RAM...
Don't Miss
- Automobiles DriveSpark: ಡ್ರೈವ್ಸ್ಪಾರ್ಕ್ನಿಂದ ಬೈಕಿಂಗ್ ಕಮ್ಯುನಿಟಿ ಆರಂಭ, ನೀವು ಸೇರಬಹುದು
- News Congress Women Candidates: ಕಾಂಗ್ರೆಸ್ ಎರಡನೇ ಪಟ್ಟಿಯಲ್ಲಿ ಮಗಳು, ಸೊಸೆ: ಏನಿದು ಲೆಕ್ಕಾಚಾರ?
- Movies Breaking: ಬಿಗ್ಬಾಸ್ ಖ್ಯಾತಿಯ ಸೋನು ಶ್ರೀನಿವಾಸ್ ಗೌಡ ಬಂಧನ
- Finance ದೆಹಲಿ ಸಿಎಂ ಅರವಿಂದ್ ಕೇಜ್ರಿವಾಲ್ ಬಂಧನ, ಇಡಿ ಕಚೇರಿಗೆ ಬಂದ ವೈದ್ಯರು
- Sports IPL 2024: RCB ಪರ ಈ ಐವರು ಮಿಂಚಿದರೆ 2008ರಲ್ಲಿ ಮಾಡಿದ ಸಾಧನೆ ಮಾಡಬಹುದು
- Lifestyle ಡೌನ್ ಸಿಂಡ್ರೋಮ್:ಆ ಮಕ್ಕಳ ಒಳ್ಳೆಯ ಭವಿಷ್ಯಕ್ಕೆ ಏನು ಮಾಡಬೇಕು? ಈ ಸಮಸ್ಯೆಯಿದ್ದರೆ ಗರ್ಭಿಣಿಯಾಗಿದ್ದಾಗಲೇ ತಿಳಿಯುವುದೇ?
- Education ವರ್ಧಿತ ಉತ್ಪಾದಕತೆಗಾಗಿ ಪ್ರತಿಯೊಬ್ಬರೂ ಕಲಿಯಬೇಕಾದ 10 ಅಗತ್ಯ ಕೌಶಲ್ಯಗಳು
- Travel Bengaluru to Ayodhya: ಬೆಂಗಳೂರಿನಿಂದ ಅಯೋಧ್ಯೆ ತಲುಪುವುದು ಹೇಗೆ? ನೀವಲ್ಲಿ ನೋಡಲೇಬೇಕಿರುವ ಸ್ಥಳಗಳು ಯಾವವು? ಮಾಹಿತಿ
ರಿಲಯನ್ಸ್ ದಿವಾಳಿ..ಅಂಬಾನಿ ದೇಶ ಬಿಡದಂತೆ ಕೋರಿ ಕೋರ್ಟ್ಗೆ ಅರ್ಜಿ!!
ಭಾರತದ ಶ್ರೀಮಂತ ಅಣ್ಣ ತಮ್ಮಂದಿರಾಗಿರುವ ಅಂಬಾನಿ ಸಹೋದರರ ಉದ್ಯಮ ವಲಯದಲ್ಲಿ ಭಾರೀ ವ್ಯತ್ಯಾಸಗಳಾಗುತ್ತಿವೆ. ಅಣ್ಣ ಮುಖೇಶ್ ಅಂಬಾನಿ ದೇಶದ ಶ್ರೀಮಂತ ಉದ್ಯಮಿಯಾಗಿ ಬೆಳೆಯುತ್ತಿದ್ದರೆ, ಇತ್ತ ತಮ್ಮ ಅನಿಲ್ ಅಂಬಾನಿ ಮಾತ್ರ ನಷ್ಟದಲ್ಲಿ ಮುಳುಗಿದ್ದಾರೆ. ಆರ್ಕಾಂಗೆ ಆಗಿರುವ ನಷ್ಟದಿಂದಾಗಿ ಅನಿಲ್ ಅಂಬಾನಿ ದೇಶ ಬಿಡದಂತೆ ಸುಪ್ರೀಂಕೋರ್ಟ್ಗೆ ಅರ್ಜಿ ಸಲ್ಲಿಕೆಯಾಗಿದೆ.
ಹೌದು, ರಿಲಯನ್ಸ್ ಗ್ರೂಪ್ನ (ಆರ್ಕಾಂ) ಮುಖ್ಯಸ್ಥ ಅನಿಲ್ ಅಂಬಾನಿ ಸೇರಿದಂತೆ ರಿಲಯನ್ಸ್ ಗ್ರೂಪ್ನಬ್ಬರು ಹಿರಿಯ ಅಧಿಕಾರಿಗಳು ಭಾರತ ತೊರೆಯದಂತೆ ತಡೆಗಟ್ಟುವಂತೆ ಕೋರಿ ಸ್ವೀಡನ್ ಮೂಲದ ಎರಿಕ್ಸನ್ ಕಂಪನಿ ಸುಪ್ರೀಂಕೋರ್ಟ್ಗೆ ಅರ್ಜಿ ಸಲ್ಲಿಸಿದೆ. ಒಪ್ಪಂದದಂತೆ ಹಣ ಪಾವತಿ ಆಗಿಲ್ಲದಿರುವುದರಿಂದ ಎರಿಕ್ಸನ್ ಕಂಪನಿಯು ಸುಪ್ರೀಂಕೋರ್ಟ್ ಮೊರೆ ಹೋಗಿದೆ.
ರಿಲಯನ್ಸ್ (ಆರ್ಕಾಂ) ಮತ್ತು ಎರಿಕ್ಸನ್ ಕಂಪನಿಗಳ ನಡುವಿನ ಒಪ್ಪಂದಂತೆ, ರಿಲಾಯನ್ಸ್ ಕಂಪೆನಿ 1,600 ಕೋಟಿ ರೂಪಾಯಿ ಹಣವನ್ನು ಪಾವತಿಸಬೇಕಿದೆ. ಅದರಲ್ಲಿ 550 ಕೋಟಿ ರೂಪಾಯಿ ಹಣವನ್ನು ಈ ಸೆಪ್ಟೆಂಬರ್ 30ರ ಒಳಗಾಗಿ ಪಾವತಿಸಬೇಕಿತ್ತು. ಈ ಹಣ ಪಾವತಿಯಾಗದೇ ಇರುವುದರಿಂದ ಆರ್ಕಾಂ ಮುಖ್ಯಸ್ಥ ಮತ್ತು ಅಧಿಕಾರಿಗಳ ಮೇಲೆ ಎರಿಕ್ಸನ್ ಕಂಪೆನಿ ದಾವೆ ಹೂಡಿದೆ.
"ಅವರು ದೇಶದ ಕಾನೂನು ಬಗ್ಗೆ ಯಾವುದೇ ಗೌರವ ಹೊಂದಿಲ್ಲ. ಕಾನೂನುಗಳನ್ನು ದುರುಪಯೋಗ ಪಡೆಸಿಕೊಳ್ಳುವ ಸಾಧ್ಯತೆ ಇದೆ. ಹಾಗಾಗಿ, ಆರ್ಕಾಮ್ ಕಂಪನಿಯ ಯಾವುದೇ ಹಿರಿಯ ಅಧಿಕಾರಿ ದೇಶ ಬಿಟ್ಟು ಹೋಗದಂತೆ ತಡೆಗಟ್ಟಬೇಕು. ದೇಶ ತೊರೆಯುವ ನಿರ್ಧಾರ ತೆಗೆದುಕೊಂಡರೆ ಅದನ್ನು ತಿರಸ್ಕರಿಸುವ ಅವಶ್ಯಕತೆ ಇದೆ'' ಎಂದು ಎರಿಕ್ಸನ್ ಕಂಪನಿ ಮನವಿ ಮಾಡಿದೆ.
ಆರ್ಕಾಂ ಕಂಪೆನಿ ಟೆಲಿಕಾಂ ಉಪಕರಣಗಳ ಪೂರೈಕೆದಾರ ಎರಿಕ್ಸನ್ ಕಂಪನಿಯಿಂದ ಹಲವು ವರ್ಷಗಳ ಕಾಲ ಸಾಕಷ್ಟು ಸರಕನ್ನು ಖರೀದಿಸಿದೆ. ಆದರೆ, ಪೂರ್ತಿ ಹಣವನ್ನು ಪಾವತಿಸದೆ 1150 ಕೋಟಿರೂ. ಹಣವನ್ನು ಬಾಕಿ ಉಳಿಸಿಕೊಂಡಿದೆ. ಈ ಹಣಕ್ಕಾಗಿ ಎರಿಕ್ಸನ್ ರಾಷ್ಟ್ರೀಯ ಕಂಪನಿ ಕಾಯ್ದೆಗಳ ನ್ಯಾಯಾಧಿಕರಣದಲ್ಲಿ ರಿಲಯನ್ಸ್ ವಿರುದ್ಧ ದಿವಾಳಿ ಅರ್ಜಿಗಳನ್ನು ಸಲ್ಲಿಸಿತ್ತು.
ಓದಿರಿ: ಇನ್ಮುಂದೆ ವಾಟ್ಸ್ಆಪ್ ಸ್ಟೇಟಸ್ ತೆರೆದರೆ ನಿಮಗೆ ಕಾಣಿಸುವುದೇ ಬೇರೆ!!
ಗೂಗಲ್ ಸಾಫ್ಟ್ವೇರ್ ನಿಗದಿಯಂತೆ ಮೃತಪಟ್ಟಳು ಆಕೆ!..ನಿಮ್ಮ ಸಾವು ಯಾವಾಗ ಕೇಳಿ?!
ಆರ್ಟಿಫಿಷಿಯಲ್ ಇಂಟೆಲಿಜೆನ್ಸ್ (ಕೃತಕ ಬುದ್ದಿಮತ್ತೆ) ಈಗ ಬರೀ ಸ್ಮಾರ್ಟ್ಫೋನ್ಗಷ್ಟೇ ಸೀಮಿತವಾಗಿಲ್ಲ. ಬದಲಾಗಿ ಎಲ್ಲರ ನಿರೀಕ್ಷೆ ಮೀರಿ ಬೆಳೆದುನಿಂತಿದೆ. ಸ್ಮಾರ್ಟ್ಫೋನ್ ಪರದೆ ಮೇಲೆ ಕೈಯಾಡಿಸದೇ ಒಂದು ಸ್ಮಾರ್ಟ್ ಫೋನ್ನ್ನು ಹೇಗೆಲ್ಲಾ ಬಳಸಬಹುದು ಎಂದು ತೋರಿಸಿಕೊಟ್ಟಿದ್ದ ಈ ತಂತ್ರಜ್ಞಾನ ಮನುಷ್ಯನ ಜೀವನವನ್ನೇ ಬದಲಾಯಿಸೋಕೆ ಹೊರಟಿದೆ.
ಹೌದು, ಹುಟ್ಟು ಮತ್ತು ಸಾವು ಎರಡೂ ನಮ್ಮ ಕೈಯಲಿಲ್ಲ. ಮನುಷ್ಯ ಅತಿಯಾಗಿ ಭಯಪಡುವ ವಿಷಯಗಳಲ್ಲಿ ಸಾವೂ ಒಂದು. ಈಗ ಇರುವವನು ಮುಂದಿನ ಕ್ಷಣದಲ್ಲಿ ಇರುತ್ತಾನೋ ಇಲ್ಲವೋ ಎಂಬ ಯುಗದಲ್ಲಿ ನಾವು ಈಗ ಜೀವಿಸುತ್ತಿದ್ದೇವೆ. ಈ ಸಮಯದಲ್ಲಿ ಮನುಷ್ಯನ ಸಾವು ಯಾವಾಗ ಸಂಭವಿಸಬಹುದು ಎಂದು ಭವಿಷ್ಯ ಹೇಳುವ ತಂತ್ರಜ್ಞಾನ ಬಂದರೆ ಹೇಗೆ.?
ಇದೊಂದು ನಂಬಲಸಾಧ್ಯವಾದ ಮಾತೆಂದು ನಾವು ನೀವು ಹೇಳಬಹುದು. ಆದರೆ ಮಾಹಿತಿ ತಂತ್ರಜ್ಞಾನದ ಶ್ರೇಷ್ಠ ದಿಗ್ಗಜ ಎಂದಲೇ ಖ್ಯಾತಿಯಾಗಿರುವ ಗೂಗಲ್ ಇದು ಸಾಧ್ಯ ಎಂದು ಹೇಳಿದೆ. ಯಮನಿಗೇ ಸವಾಲೆಸೆಯೋಕೆ ಹೊರಟಿದೆ ಈ ಆರ್ಟಿಫಿಷಿಯಲ್ ಇಂಟೆಲಿಜೆನ್ಸ್ ತಂತ್ರಜ್ಞಾನ. ಹಾಗಾದರೆ, ಏನಿದು ವೈರಲ್ ಸ್ಟೋರಿ ಎಂಬುದನ್ನು ಮುಂದೆ ಓದಿ ತಿಳಿಯಿರಿ.
ನಿಗದಿಯಂತೆ ಮೃತಪಟ್ಟಳು ಆಕೆ!
ಇತ್ತೀಚಿಗಷ್ಟೇ ಗೂಗಲ್ ತನ್ನ ಆರ್ಟಿಫಿಷಿಯಲ್ ಇಂಟೆಲಿಜೆನ್ಸ್ ಸಾಫ್ಟ್ವೇರ್ ಅನ್ನು ಸ್ತನ ಕ್ಯಾನ್ಸರ್ನಿಂದ ಬಳಲುತ್ತಿದ್ದ ಒಬ್ಬ ಮಹಿಳೆಯ ಮೇಲೆ ಪ್ರಯೋಗಿಸಲಾಗಿತ್ತು. ಆ ಮಹಿಳೆಯ ಮೇಲೆ ಅಧ್ಯಯನ ನಡೆಸಿದ್ದ ಗೂಗಲ್ ಆಕೆ ಅಸುನೀಗುವ ದಿನಾಂಕವನ್ನ ಅಂದಾಜಿಸಿತ್ತು. ಸೋಜಿಗ ಎಂಬಂತೆ ಅದು ನಿಗದಿಪಡಿಸಿದ್ದ ದಿನಾಂಕದಂದೇ ಮೃತಪಟ್ಟಿದ್ದಳು.!
ರೋಗಿಗಳ ಭವಿಷ್ಯವನ್ನ ಹೇಳುವ ತಂತ್ರಜ್ಞಾನ!
ಗೂಗಲ್ ಕಂಪನಿಯ ಮೆಡಿಕಲ್ ಬ್ರೇನ್ಟೀಂನ ತಂತ್ರಜ್ಞರು ಒಂದು ವಿನೂತನ ಆರ್ಟಿಫಿಷಿಯಲ್ ಇಂಟೆಲಿಜೆನ್ಸ್ ಆಲ್ಗೋರಿಥಮ್ ಅಭಿವೃದ್ಧಿಪಡಿಸಿದ್ದು ಈ ಮೂಲಕ ಆಸ್ಪತ್ರೆಯಲ್ಲಿ ದಾಖಲಾಗಿರುವ ರೋಗಿಗಳು ಬದುಕುಳಿಯುತ್ತಾರಾ ಅಥವಾ ಇಲ್ಲವಾ ಅನ್ನೋದರ ಬಗ್ಗೆ ಭವಿಷ್ಯವನ್ನ ಹೇಳುತ್ತದೆ.
93ರಷ್ಟು ಯಶಸ್ಸು ಕಂಡಿರುವ ತಂತ್ರಜ್ಞಾನ!
ಈ ತಂತ್ರಜ್ಞಾನ ಅಭಿವೃದ್ಧಿಪಡಿಸುವುದಕ್ಕೆ ಗೂಗಲ್ನ ಮೆಡಿಕಲ್ ಬ್ರೇನ್ ತಂಡ ಹಲವಾರು ಹಂತಗಳಲ್ಲಿ ಅಧ್ಯಯನ ನಡೆಸಿದೆ. ಅಧ್ಯಯನದ ಮೊದಲ ಹಂತದಲ್ಲಿ ಶೇ 95ರಷ್ಟು ಹಾಗೂ ಎರಡನೇ ಹಂತದಲ್ಲಿ 93ರಷ್ಟು ಯಶಸ್ಸು ಕಂಡಿದ್ದು ಈ ಮೂಲಕ ಸಾವನ್ನು ಪ್ರೆಡಿಕ್ಟ್ ಮಾಡುವುದಕ್ಕೆ ಸಾಧ್ಯ ಎಂದು ತೋರಿಸಿಕೊಟ್ಟಿದೆ.
ಈ ಬಗ್ಗೆ ಗೂಗಲ್ ಹೇಳಿದ್ದೇನು?
ಕಳೆದ ವಾರವಷ್ಟೇ ಗೂಗಲ್ ತಾನು ಹೇಗೆ ಈ ತಂತ್ರಜ್ಞಾನವನ್ನ ಅಭಿವೃದ್ಧಿಪಡಿಸುವುದಕ್ಕೆ ಸಾಧ್ಯವಾಗಿದೆ ಎಂದು ಬ್ರಿಟನ್ನ ನಿಯತಕಾಲಿಕೆಯಲ್ಲಿ ಪ್ರಕಟಿಸಿದೆ. ತಾನು ಅಭಿವೃದ್ಧಿಪಡಿಸಿರುವ ತಂತ್ರಜ್ಞಾನ ವೈದ್ಯರು ಸೂಚಿಸಿರುವ ಮಾದರಿಗಳಿಗಿಂತಲೂ ವಿಭಿನ್ನ ಹಾಗೂ ಇನ್ನೂ ಹೆಚ್ಚು ಪರಿಣಾಮಕಾರಿಯಾಗಿದೆ ಎಂದು ತಿಳಿಸಿದೆ.
ತಂತ್ರಜ್ಞಾನ ಬಳಕೆಯಾಗುವುದು ಹೇಗೆ?
ಗೂಗಲ್ನ ಈ ಸಾಫ್ಟ್ವೇರ್ ರೋಗಿಗಳ ವೈದ್ಯಕೀಯ ವರದಿಯನ್ನ ಸಂಪೂರ್ಣವಾಗಿ ವಿಶ್ಲೇಷಿಸಲಿದೆ. ಇದರಲ್ಲಿ ಅವರ ವಯಸ್ಸು, ಲಿಂಗ, ಈ ಹಿಂದೆ ಪರೀಕ್ಷಿಸಿದ್ದ ಎಲ್ಲಾ ರೀತಿಯ ವರದಿಗಳನ್ನು ನೋಡಲಿದೆ. ರೋಗಿಯ ಎಲ್ಲಾ ಮೆಡಿಕಲ್ ರೆಕಾರ್ಡ್ಸ್ ಮತ್ತು ವೈದ್ಯರು ರೋಗಿಗಳಿಗೆ ನಡೆಸುವ ತಪಾಸಣೆಯ ವಿವರಗಳನ್ನೂ ತಪಾಸಣೆ ಮಾಡಿ ಮರಣದ ಬಗ್ಗೆ ಭವಿಷ್ಯ ನುಡಿಯುತ್ತದೆ.
ಮರಣದ ದಿನಾಂಕ ಊಹೆ ಕಷ್ಟವಲ್ಲ!!
ಈ ತಂತ್ರಜ್ಞಾನವನ್ನ ಇನ್ನೂ ಪರಿಣಾಮಕಾರಿಯಾಗಿ ಸಿದ್ಧಪಡಿಸಲು ಗೂಗಲ್ ಪ್ರಯತ್ನಿಸುತ್ತಿದೆ. ಈ ಮೂಲಕ ರೋಗಿಗಳ ಖರ್ಚುಗಳ ಬಗ್ಗೆ ನಿಗಾ ಇಡಬಹುದಾಗಿದೆ. ಎಲ್ಲಾ ಅಂದುಕೊಂಡಂತೆ ಆದಲ್ಲಿ ಮುಂದೊಂದು ದಿನ ವ್ಯಕ್ತಿಗಳ ಸಾಯುವ ದಿನಾಂಕವನ್ನ ಅಂದಾಜಿಸುವ ಒಂದು ನಿಖರವಾದ ಯಂತ್ರ ಬಂದರೆ ಅದು ಆಶ್ಚರ್ಯವೇನಿಲ್ಲ.
21ನೇ ವಯಸ್ಸಿಗೆ ಕೋಟ್ಯಾಧೀಶ್ವರ; ಸ್ವಂತ ಮನೆ, ಬಿಎಂಡಬ್ಲೂ ಒಡೆಯನಾದ ಬಡ ಯುವಕನ ಯಶೋಗಾಥೆ!!
ಹತ್ತನೇ ವಯಸ್ಸಿನಲ್ಲಿ ಆತನಿಗೆ ಉಡುಗೊರೆಯಾಗಿ ಸಿಕ್ಕಿದ್ದು ಒಂದು ಕಂಪ್ಯೂಟರ್ ಮಾತ್ರ. ಅಲ್ಲಿಂದ ಆತ ಯಾವತ್ತೂ ಸಹ ಜೀವನವನ್ನು ಹಿಂತಿರುಗಿ ನೋಡಲೇ ಇಲ್ಲ. ಏಕೆಂದರೆ, ಆ ಕಂಪ್ಯೂಟರ್ ಜೊತೆಗಿನ ಅವನ ಒಡನಾಟ ಮತ್ತು ಆತನ ಕಠಿಣ ಪರಿಶ್ರಮ ಇಂದು ಆತನನ್ನು ಕೋಟ್ಯಾಧಿಪತಿಯನ್ನಾಗಿಸಿದೆ. ಆತನ 21ನೇ ವಯಸ್ಸಿನ ವೇಳೆಗೆ ವಾರ್ಷಿಕ ಎರಡು ಕೋಟಿ ರೂಪಾಯಿ ಆದಾಯ ಹೊಂದಿರುವ ಕಂಪೆನಿಯ ಮಾಲಿಕನನ್ನಾಗಿಸಿದೆ ಎಂದರೆ ನೀವು ನಂಬಲೇಬೇಕು.!
ಹೌದು, ಇದು ಕೇರಳ ರಾಜ್ಯದ ಕಣ್ಣೂರಿನ ಹುಡುಗ ಜಾವೇದ್ ಎಂಬ ಯುವಕನ ಯಶಸ್ವಿ ಯುವಕನ ಕಥೆ. ಈ ಉದ್ಯಮಶೀಲ ಯುವಕನ ಯಶೋಗಾಥೆ ಎಲ್ಲರಿಗೂ ಸ್ಪೂರ್ತಿಯ ಚಿಲುಮೆ. ಎಳೆಯ ವಯಸ್ಸಿನಲ್ಲಿಯೇ ಕಠಿಣ ಪರಿಶ್ರಮ ಮತ್ತು ಸಾಮರ್ಥ್ಯದಿಂದ ಅದ್ಬುತ ಯಶಸ್ಸನ್ನು ಸಾಧಿಸಿರುವ ಈತ ಈಗ ಯುವಕರ ಆಶಾಕಿರಣ ಎಂದರೆ ತಪ್ಪಾಗಲಾರದು.! ಏಕೆಂದರೆ, ಈಗ ತನ್ನ 21ನೇ ವಯಸ್ಸಿನ ವೇಳೆಗೆ ಹತ್ತಾರು ಜನರಿಗೆ ಉದ್ಯೋಗ ನೀಡಿರುವ ಈಗ ವಿಶ್ವದಾಧ್ಯಂತ ಗ್ರಾಹಕರನ್ನು ಹೊಂದಿದ್ದಾನೆ.
ಇ-ಕಾಮರ್ಸ್, ವೆಬ್ಡಿಸೈನ್ ಮತ್ತು ಮೊಬೈಲ್ ಅಪ್ಲಿಕೇಷನ್ ಅಭಿವೃದ್ದಿಪಡಿಸುವ "ಟಿಎಂಎನ್ ಆನ್ಲೈನ್ ಸೊಲ್ಯೂಷನ್'' ಎಂಬ ತನ್ನದೇ ಸ್ವಂತ ಕಂಪೆನಿಯನ್ನು ಹುಟ್ಟಿಹಾಕಿಕೊಂಡಿರುವ ಜಾವೇದ್ ಈಗ ಎಲ್ಲರಿಗೂ ಚಿರಪರಿಚಿತನಾಗಿದ್ದಾನೆ, ಹಾಗಾದರೆ, ಕಣ್ಣೂರಿನ ಹುಡುಗ ಜಾವೇದ್ ಬಾಲ್ಯ ಜೀವನ ಹೇಗಿತ್ತು? ಕಂಪ್ಯೂಟರ್ ಪ್ರಪಂಚದಲ್ಲಿ ಜಾವೇದ್ ಕೋಟಿ ಕೋಟಿ ಹಣವನ್ನು ಗಳೀಸಲು ಸಾಧ್ಯವಾಗಿದ್ದು ಹೇಗೆ? ಕಂಪ್ಯೂಟರ್ ಜೊತೆಗಿನ ಜಾವೆದ್ನ ಒಡನಾಟ ಮತ್ತು ಆತನ ಕಠಿಣ ಪರಿಶ್ರಮ ಹೇಗಿತ್ತು ಎಂಬ ಕುತೋಹಲ ಮಾಹಿತಿಯನ್ನು ಮುಂದೆ ತಿಳಿಯಿರಿ.
ಕಂಪ್ಯೂಟರ್ ಮತ್ತು ಇಂಟರ್ನೆಟ್!!
ಈಗ ಯಶಸ್ವಿ ಉದ್ಯಮಿಯಾಗಿರುವ ಜಾವೇದ್ ಅವರ ಮೂಲ ಹೆಸರು ಮೊಹಮ್ಮದ್ ಜಾವೇದ್ ಟಿ ಎನ್ ಎಂದಾಗಿತ್ತು. ಹತ್ತನೇ ವಯಸ್ಸಿನಲ್ಲಿ ಜಾವೇದ್ ಹುಟ್ಟುಹಬ್ಬಕ್ಕೆ ಅವರ ತಂದೆ ಕಂಪ್ಯೂಟರ್ ಮತ್ತುನ ಇಂಟರ್ನೆಟ್ ಅನ್ನು ಉಡುಗೊರೆಯಾಗಿ ನೀಡಿದ್ದರು. ಇದು ಜಾವೇದ್ಗೆ ಬಹಳ ಕುತೋಹಲ ಮೂಡಿಸಿತ್ತು. ನಂತರದ ದಿನಗಳಲ್ಲಿ ಜಾವೇದ್ನ ಕಂಪ್ಯೂಟರ್ ಮೇಲಿನ ಕುತೋಹಲ ಅವನನ್ನು ಕಂಪ್ಯೂಟರ್ ಲೋಕಕ್ಕೆ ಇಳಿಸಿಬಿಟ್ಟಿತ್ತು.
ಗೂಗಲ್ ಕೊಟ್ಟಿದ್ದು ಲಕ್ಕಿ ನೇಮ್!!
ಅಪ್ಪ ಏನೋ ಕಂಪ್ಯೂಟರ್ ಕೊಡಿಸಿದರು. ಆದರೆ, ಆ ಹಂತದಲ್ಲಿ ಜಾವೇದ್ ಬಳಿಯಲ್ಲಿ ಐಡಿ ಇರಲಿಲ್ಲ. ಹಾಗಾಗಿ, ಜಾವೇದ್ ಹೆಸರಿನಲ್ಲಿ ಐಡಿ ಕ್ರಿಯೇಟ್ ಮಾಡಲು ಮುಂದಾಗಿದ್ದರೆ, ಆ ಹೆಸರಿನಲ್ಲಿ ಐಡಿ ಲಭ್ಯವಿರಲಿಲ್ಲ. ಇದರ ಬದಲಾಗಿ ಟಿಎನ್ಎಮ್ ಜಾವೇದ್ ಎಂಬ ಹೆಸರಿನಲ್ಲಿ ಐಡಿ ಸೃಷ್ಟಿಸುವಂತೆ ಗೂಗಲ್ನಿಂದ ಸಲಹೆ ಬಂತು. ಆ ಹೆಸರು ಜಾವೇದ್ ಅವರಿಗೆ ಲಕ್ಕಿ ಹೆಸರಾಗಿಯೂ ಕ್ಲಿಕ್ ಆಯಿತು. ಗೂಗಲ್ನ ಸದ್ಬಳಕೆಯಿಂದ ಕೋಟಿ, ಕೋಟಿ ಹಣಗಳಿಸುವಂತೆ ಸಹ ಮಾಡಿತು.
ವೆಬ್ಸೈಟ್ ಸೃಷ್ಟಿಸುವುದು ಹೇಗೆ?
ಬಾಲಕ ಜಾವೇದ್ ಕಂಪ್ಯೂಟರ್ ಜೊತೆಗೆ ಸಮಯ ಕಳೆಯುವ ವೇಳೆ ಆತನಿಗೆ ಯಾವಾಗಲೂ ತಲೆಯಲ್ಲಿ ಪ್ರಶ್ನೆಗಳು ತುಂಬಿರುತ್ತಿದ್ದವಂತೆ.! ವೆಬ್ಸೈಟ್ ಸೃಷ್ಟಿಸುವುದು ಹೇಗೆ?, ಅವು ಹೇಗೆ ಕಾರ್ಯನಿರ್ವಹಿಸುತ್ತವೆ? ಇದನ್ನೆಲ್ಲಾ ಮಾಡುವವರು ಯಾರು? ಹೀಗೆ ಪ್ರತಿಯೊಂದನ್ನು ತಿಳಿದುಕೊಳ್ಳುವುದರಲ್ಲಿ ನನಗೆ ಕುತೋಹಲವಿತ್ತು. ಒಂದರ್ಥದಲ್ಲಿ ಆ ಸಮಯದಲ್ಲಿ ನಾನು ಕಂಪ್ಯೂಟರ್ ವ್ಯಸನಿಯಾಗಿದ್ದೆ, ಆದರೆ ಒಳ್ಳೆಯ ಉದ್ದೇಶಕ್ಕಾಗಿ ಎಂದು ಜಾವೇದ್ ಅವರು ನೆನಪಿಸಿಕೊಳ್ಳುತ್ತಾರೆ.
10 ನೇ ತರಗತಿಯಲ್ಲಿ ವೆಬ್ಸೈಟ್ ತಯಾರಿಸಿದ!!
ಕಂಪ್ಯೂಟರ್ ಜಗತ್ತಿನ ಬಗ್ಗೆ ಜಾವೇದ್ಗೆ ತಿಳಿದುಕೊಳ್ಳುವ ಹಂಬಲದಿಂದ ಆ ಕಂಪ್ಯೂಟರ್ ಬಗ್ಗೆ ಹೆಚ್ಚೆಚ್ಚು ತಿಳಿಯಲು ಆರಂಭಿಸಿದ. ಬ್ಲಾಗಿಂಗ್ ಮತ್ತು ವೆಬ್ಡಿಸೈನಿಂಗ್ ವಿಷಯಗಳ ಬಗ್ಗೆ ಆನ್ಲೈನ್ ಮೂಲಕವೇ ಹೆಚ್ಚು ತಿಳಿದುಕೊಳ್ಳುತ್ತಿದ್ದನಂತೆ. ತನ್ನ ಹತ್ತನೇ ತರಗತಿ ವೇಳೆಗೆ ಹಲವು ಬ್ಲಾಗ್ಗಳನ್ನು ಸೃಷ್ಟಿಸಿದ್ದ ಜಾವೇದ್, ನಂತರ ತನ್ನ ಸಹಪಾಠಿ ಸಿರಾಜ್ ಜೊತೆ ಸೇರಿ ಜೆಸ್ರಿ.ಟಿಕೆ ಎಂಬ ವೆಬ್ಸೈಟ್ ಕ್ರಿಯೇಟ್ ಮಾಡಿದ್ದರಂತೆ. ಡೊಮೈನ್ ಖರೀದಿಸಲು ಹಣವಲ್ಲದೇ ಉಚಿತ ಡೊಮೈನ್ ಮೂಲಕ ವೆಬ್ಸೈಟ್ ಸೃಷ್ಟಿಮಾಡಿದ್ದರಂತೆ.!
10 ನೇ ತರಗತಿಯಲ್ಲಿ ವೆಬ್ಸೈಟ್ ತಯಾರಿಸಿದ!!
ಕಂಪ್ಯೂಟರ್ ಆಸಕ್ತಿಯ ಜೊತೆಗೆ ಅಧ್ಯಯನಕ್ಕೆ ಯಾವುದೇ ತೊಂದರೆಯಾಗದಂತೆ ನೋಡಿಕೊಂಡ ಜಾವೇದ್, ವೆಬ್ಸೈಟ್ ಅಭಿವೃದ್ದಿಗೆ ಸಾಕಷ್ಟು ಅವಕಾಶಗಳಿರುವುದನ್ನು ಅಂದೇ ಕಂಡುಕೊಂಡಿದ್ದ. ಆಗಲೇ ತನ್ನ ಮೊಟ್ಟ ಮೊದಲ "ಟಿಎಂಎನ್ ಆನ್ಲೈನ್ ಸೊಲ್ಯೂಷನ್'' ಎಂಬ ಡೊಮೈನ್ ನೇಮ್ ಅನ್ನು ನೊಂದಾಯಿಸಿದ. ಅಂದು ಜಾವೇದ್ ನೊಂದಾಯಿಸಿದ ಈ ಡೊಮೈನ್ ನೇಮ್ ಈಗಲೂ ವರ್ಚುವಲ್ ಕಂಪೆನಿಯಾಗಿ ಬೆಳದುನಿಂತಿದೆ. ಆಗಲೇ ಹೇಳಿದಂತೆ ಜಾವೇದ್ಗೆ ಇದು ಗೂಗಲ್ ಲಕ್ಕಿ ನೇಮ್.!!
ಸಾವಿರ ರೂಪಾಯಿಗೆ ವೆಬ್ಸೈಟ್ ಆಫರ್!!
ಡೊಮೈನ್ ನೇಮ್ ಖರೀದಿಸಿ ಕಂಪೆನಿಯನ್ನು ಕಟ್ಟಿದ ಜಾವೇದ್, ಸಾವಿರ ರೂಪಾಯಿಗೆ ವೆಬ್ಸೈಟ್ ಆಫರ್ ಅನ್ನು ಫೇಸ್ಬುಕ್ನಲ್ಲಿ ಪ್ರಕಟಿಸಿದ. ಆದರೆ, ಹೆಚ್ಚಿನ ತಾಂತ್ರಿಕ ಕೌಶಲ್ಯಗಳಿಲ್ಲದೆ ಅವರ ಕೆಲಸ ವಿಫಲವಾಗಿತ್ತು. ಆದರೆ, ಛಲಬಿಡದ ಜಾವೇದ್ ಕೆಲ ವೆಬ್ಸೈಟ್ ಡಿಸೈನ್ ಕಂಪೆನಿಗಳಿಗೆ ಭೇಟಿ ನೀಡಿ ಅಲ್ಲಿ ಹೆಚ್ಚಿನದನ್ನು ತಿಳಿದುಕೊಂಡ. ನಂತರ ಶಿಕ್ಷಕಿಯೋರ್ವರು ಕೇಳಿದಂತೆ ಮೊದಲ ವೆಬ್ಸೈಟ್ ತಯಾರಿಸಿ ನೀಡಿ 2500 ರೂ.ಹಣಗಳಿಸಿ ತನ್ನ ತಾಯಿಯ ಕೈಗಿಟ್ಟನಂತೆ ಜಾವೇದ್.!
ಕಂಪೆನಿ ಬಂಡವಾಳಕ್ಕೂ ಕಷ್ಟವಿತ್ತು!!
ಜಾವೇದ್ ಇತ್ತ ವೆಬ್ಡಿಸೈನಿಂಗ್ ಕಲಿಯುತ್ತದ್ದ ವೇಳೆಯೇ ಅವನಿಗೆ ಮತ್ತೊಂದು ಕಷ್ಟ ಎದುರಾಗಿತ್ತು. ದುಬೈನಲ್ಲಿ ಬ್ಯಾಂಕಿಂಗ್ ಕ್ಷೇತ್ರದಲ್ಲಿ ಕೆಲಸ ಮಾಡುತ್ತಿದ್ದ ಜಾವೇದ್ ತಂದೆ ಉದ್ಯೋಗ ತೊತರೆದು ವಾಪಸ್ ಆಗಿದ್ದರು. ಇದರಿಂದ ಜಾವೇದ್ ಅವರ ಮನೆಯ ಪರಿಸ್ಥಿತಿ ಬಹಳ ಕಷ್ಟವಾಗಿತ್ತು. ಈ ಸಮಯದಲ್ಲಿ ಜಾವೇದ್ ಅವರ ತಂದೆಗೆ 1 ಲಕ್ಷ ಹಣ ನೀಡಿದರೆ ಕಂಪೆನಿ ಶುರುಮಾಡುವುದಾಗಿ ಕೇಳಿಕೊಂಡನು. ಕಂಪ್ಯೂಟರ್ ಬಗ್ಗೆ ಜಾವೇದ್ಗೆ ಇದ್ದ ಆಸಕ್ತಿ ನೋಡಿ ಆ ಕಷ್ಟದಲ್ಲಿಯೇ ಅವರ ತಂದೆ 1 ಲಕ್ಷ ಹಣವನ್ನು ಹೊಂದಿಸಿ ನೀಡಿದ್ದರಂತೆ.
ಚಿನ್ನದ ಬಳೆಗಳನ್ನು ಇಟ್ಟು ಕಚೇರಿ ನಿರ್ವಹಣೆ
1 ಲಕ್ಷ ಹಣ ಹೂಡಿ ಕಂಪೆನಿ ತೆರೆದಿದ್ದ ಜಾವೇದ್ನ ಮೊದಲ ದಿನಗಳು ಬಹಳ ಕಷ್ಟದ ದಿನಗಳಾಗಿದ್ದವು. ಆ ಸಮಯದಲ್ಲಿ ಓದು ಮತ್ತು ಕೆಲಸ ಎರಡರಲ್ಲಿಯೂ ಜೀವನದ ಜಂಜಾಟದಲ್ಲಿ ಜಾವೇದ್ ಇದ್ದರು. ಆಫಿಸ್ ಬಾಡಿಗೆ ನಿಡುವಷ್ಟು ಸಹ ಆದಾಯವಿರಲಿಲ್ಲ. ಮನೆ ಪರಿಸ್ಥಿತಿ ಸಹ ಹದಗೆಟ್ಟಿತ್ತು. ಯಾವುದೇ ಪ್ರಾಜೆಕ್ಟ್ ಸಹ ಜಾವೇದ್ ಕೈ ಸೇರಿರಲಿಲ್ಲ. ಇಂತಹ ಸಮಯದಲ್ಲಿ ಜಾವೇದ್ ಧೃತಿಗೆಟ್ಟಿದ್ದರಂತೆ. ತಮ್ಮ ತಾಯಿಯ ಚಿನ್ನದ ಬಳೆಗಳನ್ನು ಇಟ್ಟು ಕಚೇರಿಯನ್ನು ನಿರ್ವಹಣೆ ಮಾಡಿದ್ದರಂತೆ.
ಇಂದು ಸ್ವಂತ ಮನೆ, ಐಶಾರಾಮಿ ಕಾರು!!
ಹಗಲು, ರಾತ್ರಿ ಎನ್ನದೇ ಸಿಕ್ಕಿದ ಕೆಲ ಗ್ರಾಹಕರ ಜೊತೆ ವ್ಯವಹರಿಸಿದ ಜಾವೇದ್ ನಂತರ ಕೇರಳದಲ್ಲಿ 10 ಸಣ್ಣ ಪ್ರಮಾಣದ ಕೆಲಸ ಪಡೆದರಂತೆ. ಆ ಸಮಯದಲ್ಲಿ ಆದಾಯಕ್ಕಿಂತ ಕೆಲಸದಲ್ಲಿ ವೈವಿಧ್ಯ ಮುಖ್ಯ ಎಂಬುದನ್ನು ಅರಿತ ಜಾವೇದ್ ಅವರು ಗ್ರಾಹಕರ ನಂಬಿಕೆಯನ್ನು ಉಳಿಸಿಕೊಂಡಿದ್ದಾರೆ. ನಂತರ ಯಶಸ್ವಿ ವೆಬ್ಡಿಸೈನ್ ಉದ್ಯಮಿಯಾಗಿ ಜಾವೇದ್ ಬೆಳೆದು ನಿಂತಿದ್ದಾರೆ. ಬಾಡಿಗೆ ಮನೆಯಲ್ಲಿಯೇ ಬೆಳೆದ ಜಾವೇದ್ ತನ್ನ ಆಸೆಯಂತೆ 19ನೇ ವಯಸ್ಸಿನಲ್ಲಿಯೇ ಸ್ವಂತ ಮನೆಯನ್ನು ಕಟ್ಟಿದ್ದಾರೆ. ಬಿಎಂಡಬ್ಲೂ ಕಾರನ್ನು ಸಹ ಖರೀದಿಸಿದ್ದಾರೆ.!
-
1,29,999
-
22,999
-
64,999
-
99,999
-
29,999
-
39,999
-
-
63,999
-
1,56,900
-
96,949
-
1,39,900
-
1,29,900
-
79,900
-
65,900
-
12,999
-
96,949
-
16,499
-
38,999
-
30,700
-
49,999
-
19,999
-
17,970
-
21,999
-
13,474
-
18,999
-
22,999
-
19,999
-
17,999
-
26,999
-
5,999