75ರ ಸ್ವಾತಂತ್ರ್ಯಕ್ಕೆ ನಭಕ್ಕೆ ಜಿಗಿಯಲಿದೆ ಮಾನವಸಹಿತ ರಾಕೆಟ್‌..! ನಮೋ ಘೋಷಣೆ..!

By Avinash
|

72ನೇ ಸ್ವಾತಂತ್ರ್ಯ ಸಂಭ್ರಮದಲ್ಲಿರುವ ದೇಶಕ್ಕೆ ಪ್ರಧಾನಿ ನರೇಂದ್ರ ಮೋದಿ ತಮ್ಮ ಕೆಂಪುಕೋಟೆಯ ಭಾಷಣದಲ್ಲಿ ಉದ್ದೇಶಿತ ಗಗನಯಾನ ಯೋಜನೆಯನ್ನು ಪ್ರಸ್ತಾಪಿಸಿದ್ದಾರೆ. ಇದರಿಂದ ಭಾರತವು ವಿಶ್ವಮಟ್ಟದಲ್ಲಿ ಮತ್ತೊಂದು ರೀತಿಯಲ್ಲಿ ಗುರುತಿಸಿಕೊಳ್ಳಲು ಸಹಾಯವಾಗುತ್ತದೆ. ಮೋದಿ ಭಾಷಣದಲ್ಲಿ ಏನೀರಲಿದೆ ಎಂದು ಎಲ್ಲರೂ ಕಾತುರದಿಂದ ಕಾಯುತ್ತಿದ್ದರು. ಅನೇಕ ಕುತೂಹಲಗಳನ್ನು ಮೋದಿ ತಣಿಸಿದ್ದಾರೆ.

75ರ ಸ್ವಾತಂತ್ರ್ಯಕ್ಕೆ ನಭಕ್ಕೆ ಜಿಗಿಯಲಿದೆ ಮಾನವಸಹಿತ ರಾಕೆಟ್‌..! ನಮೋ ಘೋಷಣೆ..!

ಪ್ರಧಾನಿ ತಮ್ಮ ಭಾಷಣದಲ್ಲಿ ವಿಜ್ಞಾನ - ತಂತ್ರಜ್ಞಾನ ಕ್ಷೇತ್ರದ ಮುಂದಿನ ಯೋಜನೆಗಳನ್ನು ಪ್ರಸ್ತಾಪಿಸಿ ಗಗನಯಾನದ ಬಗ್ಗೆ ಮಾತನಾಡಿದ್ದಾರೆ. ಇಸ್ರೋ ಮತ್ತು ಭಾರತದ ಬಹು ನಿರೀಕ್ಷಿತ ಗಗನಯಾನ ಯೋಜನೆ ಎಂದರೇನು..? ಇದರಿಂದ ಭಾರತ ಎಲ್ಲಿ ಗುರುತಿಸಿಕೊಳ್ಳಲಿದೆ..? ಗಗನಯಾನಕ್ಕೆ ಯಾವುದು ಸ್ಫೂರ್ತಿ..? ಮೋದಿ ಹೇಳಿದ್ದೇನು..? ಮುಂದೆ ನೋಡಿ..

ಏನೀದು ಗಗನಯಾನ..?

ಏನೀದು ಗಗನಯಾನ..?

ಮೋದಿ ಭಾಷಣದಲ್ಲಿ ಪ್ರಸ್ತಾಪಿಸಲ್ಪಟ್ಟ ಗಗನಯಾನ ಯೋಜನೆ, ಇಸ್ರೋದ ಮಹತ್ವಾಕಾಂಕ್ಷೆ ಯೋಜನೆಯಾಗಿದ್ದು, ದೇಶದ 75ನೇ ಸ್ವಾತಂತ್ರ್ಯ ಸಂಭ್ರಮಕ್ಕೆ ಅಂದರೆ 2022ರ ಹೊತ್ತಿಗೆ ಇಸ್ರೋ ಮಾನವ ಸಹಿತ ಗಗನಯಾನ ಮಾಡುವ ಯೋಜನೆಯಾಗಿದೆ. ಇಷ್ಟು ದಿನ ಮಾನವ ರಹಿತ ಉಪಗ್ರಹಗಳನ್ನು ಉಡಾವಣೆ ಮಾಡಿ ಅನೇಕ ಮೈಲಿಗಲ್ಲುಗಳನ್ನು ನೆಟ್ಟಿರುವ ಇಸ್ರೋಗೆ ಗಗನಯಾನ ಪ್ರಮುಖವಾಗಿದೆ.

ವಿಶ್ವದ ನಾಲ್ಕನೇ ರಾಷ್ಟ್ರ

ವಿಶ್ವದ ನಾಲ್ಕನೇ ರಾಷ್ಟ್ರ

ಉದ್ದೇಶಿತ ಗಗನಯಾನ ಯೋಜನೆಯ ಮೂಲಕ ಭಾರತ ಮಾನವ ಸಹಿತ ಬಾಹ್ಯಾಕಾಶ ಯೋಜನೆಯನ್ನು ಯಶಸ್ವಿಗೊಳಿಸಿದರೆ ಈ ಸಾಧನೆ ಮಾಡಿದ ವಿಶ್ವದ ನಾಲ್ಕನೇ ರಾಷ್ಟ್ರವಾಗಲಿದೆ. ಇದಕ್ಕೂ ಮೊದಲು ಅಮೇರಿಕಾ ಸಂಯುಕ್ತ ಸಂಸ್ಥಾನ, ರಷ್ಯಾ ಹಾಗೂ ಚೀನಾ ದೇಶಗಳು ಮಾತ್ರ ಈ ಸಾಧನೆಯನ್ನು ಮಾಡಿವೆ.

ಮೋದಿ ಹೇಳಿದ್ದೇನು..?

ಮೋದಿ ಹೇಳಿದ್ದೇನು..?

ದೆಹಲಿಯ ಕೆಂಪುಕೋಟೆಯಲ್ಲಿ ಪ್ರಧಾನಿ ಹೇಳಿದ್ದು ಹೀಗೆ, "ನಾನೀವತ್ತು ಘೋಷಿಸುತ್ತಿದ್ದೇನೆ, 2022ರ ವೇಳೆಗೆ ಅಥವಾ ಅದಕ್ಕಿಂತಲೂ ಮುಂಚೆ ಅಂದರೆ 75ನೇ ಸ್ವಾತಂತ್ರ್ಯ ಸಂಭ್ರಮಕ್ಕೆ ಭಾರತ ಮಾತೆಯ ಪುತ್ರ ಅಥವಾ ಪುತ್ರಿ ಬಾಹ್ಯಾಕಾಶಕ್ಕೆ ಹೋಗಲಿದ್ದಾರೆ. ಅವರ ಜತೆ ಭಾರತದ ರಾಷ್ಟ್ರ ಧ್ವಜವಿರಲಿದ್ದು, 75ನೇ ಸ್ವಾತಂತ್ರ್ಯ ಸಂಭ್ರಮಕ್ಕೆ ಮಹತ್ತರ ಕೊಡುಗೆಯಾಗಲಿದೆ" ಎಂದು ಉದ್ದೇಶಿತ ಗಗನಯಾನದ ಬಗ್ಗೆ ಅಭಿಪ್ರಾಯ ಹಂಚಿಕೊಂಡರು.

ಪರೀಕ್ಷೆಯಲ್ಲಿ ಯಶಸ್ವಿ

ಪರೀಕ್ಷೆಯಲ್ಲಿ ಯಶಸ್ವಿ

ಮಾನವ ಸಹಿತ ಬಾಹ್ಯಾಕಾಶ ಯಾನ ಮಾಡಲು ಇಸ್ರೋ ಹೀಗಾಗಲೇ ಅನೇಕ ಪರೀಕ್ಷಾರ್ಥ ಪ್ರಯೋಗಗಳನ್ನು ಆರಂಭಿಸಿದ್ದು, ಕಳೆದ ತಿಂಗಳು ಪ್ಯಾಡ್‌ ಅಬಾರ್ಟ್‌ ಎಂಬ ಪರೀಕ್ಷೆಯನ್ನು ಯಶಸ್ವಿಯಾಗಿ ನಡೆಸಿದೆ. ಪ್ಯಾಡ್‌ ಅಬಾರ್ಟ್‌ ಅಥವಾ ಕ್ರೂ ಎಸ್ಕೇಪ್‌ ಸಿಸ್ಟಮ್‌ ತುರ್ತು ಪಾರಾಗುವ ವ್ಯವಸ್ಥೆಯಾಗಿದ್ದು, ಉಡಾವಣಾ ವಾಹನ ಕಾರ್ಯಾಚರಣೆಯನ್ನು ಸ್ಥಗಿತಗೊಳಿಸಿದಾಗ ಬಾಹ್ಯಾಕಾಶಯಾನಿಗಳು ಪಾರಾಗಲು ಇರುವ ಉತ್ತಮ ಮಾರ್ಗವಾಗಿದೆ. ಶ್ರೀಹರಿಕೋಟಾದ ಸತೀಶ್ ಧವನ್ ಬಾಹ್ಯಾಕಾಶ ಕೇಂದ್ರದಲ್ಲಿ ಈ ಪರೀಕ್ಷೆಯನ್ನು ಮಾಡಲಾಯಿತು.

9000 ಕೋಟಿ ರೂ. ಯೋಜನೆ

9000 ಕೋಟಿ ರೂ. ಯೋಜನೆ

ಇಸ್ರೋ ಉದ್ದೇಶಿತ ಗಗನಯಾನ ಯೋಜನೆಗೆ 9000 ಕೋಟಿ ರೂ. ಖರ್ಚು ಮಾಡಲು ಉದ್ದೇಶಿಸಿದ್ದು, ಇದುವರೆಗೂ 173 ಕೋಟಿ ರೂ.ಗಳನ್ನು ಹ್ಯೂಮನ್ ಸ್ಪೇಸ್‌ ಪ್ಲೈಟ್‌ನಲ್ಲಿ ಸೂಕ್ಷ್ಮ ತಂತ್ರಜ್ಞಾನಗಳನ್ನು ಅಭಿವೃದ್ಧಿಪಡಿಸಲು ಖರ್ಚು ಮಾಡಿದ್ದು, ಯಶಸ್ವಿಯಾಗಿ ಗಗನಯಾನ ಮಾಡುವ ಉತ್ಸಾಹದಲ್ಲಿ ಇಸ್ರೋ ಇದೆ.

ಸ್ಫೂರ್ತಿಯಾದ ಚಂದ್ರಯಾನ - 1

ಸ್ಫೂರ್ತಿಯಾದ ಚಂದ್ರಯಾನ - 1

ಇಸ್ರೋದ ಉದ್ದೇಶಿತ ಗಗನಯಾನಕ್ಕೆ ಚಂದ್ರಯಾನ -1 ರ ಯಶಸ್ಸು ಸ್ಫೂರ್ತಿಯಾಗಿದೆ. ಅಕ್ಟೋಬರ್ 2008ರಲ್ಲಿ ಚಂದ್ರಯಾನ -1 ಉಪಗ್ರಹ ಉಡಾವಣೆ ಮಾಡಲಾಯಿತು. ಅದು 2009ರ ಅಕ್ಟೋಬರ್‌ನಿಂದ ತನ್ನ ಕಾರ್ಯನಿರ್ವಹಣೆಯನ್ನು ಆರಂಭಿಸಿ ಸುಮಾರು ಒಂದು ವರ್ಷದ ಕಾಲ ಅನೇಕ ಅಂಶಗಳನ್ನು ಕಂಡುಹಿಡಿಯಲು ಸಹಾಯವಾಯಿತು. ಚಂದ್ರನ ಮೇಲೆ ನೀರಿರುವುದನ್ನು ಪತ್ತೆ ಹಚ್ಚಿದ ಚಂದ್ರಯಾನ- 1 ತನ್ನ ಉದ್ದೇಶಿತ ಕಾರ್ಯಯೋಜನೆಯ ಶೇ.95ರಷ್ಟು ಕಾರ್ಯವನ್ನು ಪೂರ್ಣಗೊಳಿಸಿದೆ.

ಗಗನಯಾನಕ್ಕೂ ಮುಂಚೆ ಚಂದ್ರಯಾನ -2

ಗಗನಯಾನಕ್ಕೂ ಮುಂಚೆ ಚಂದ್ರಯಾನ -2

ಚಂದ್ರಯಾನ-1ರ ಯಶಸ್ವಿ ನಂತರ ಚಂದ್ರನ ಮೇಲ್ಮೈನ್ನು ಇನ್ನು ಹೆಚ್ಚಿನ ಅಧ್ಯಯನ ಮಾಡಲು ಇಸ್ರೋ ಚಂದ್ರಯಾನ-2 ಯೋಜನೆ ಕೈಗೆತ್ತಿಕೊಂಡಿದೆ. 2019ರ ಜನೇವರಿ ಮತ್ತು ಮಾರ್ಚ್ ನಡುವಿನ ಅವಧಿಯಲ್ಲಿ ಇಸ್ರೋ ಚಂದ್ರಯಾನ-2 ಉಡಾವಣೆ ಮಾಡಲಿದೆ. ಇದೇ ವರ್ಷ ಉಡಾವಣೆಯಾಗಬೇಕಿದ್ದ ಚಂದ್ರಯಾನ-2 ಚಂದ್ರನ ಮೇಲೆ ಸುರಕ್ಷಿತವಾಗಿ ಲ್ಯಾಂಡ್‌ ಆಗಲಿ ಎಂದು ಸ್ಪೇಸ್‌ಕ್ರಾಫ್ಟ್‌ನಲ್ಲಿ ಅನೇಕ ಬದಲಾವಣೆ ತರುತ್ತಿರುವುದರಿಂದ ಮುಂದಿನ ವರ್ಷಕ್ಕೆ ಮುಂದೂಡಲ್ಪಟ್ಟಿದೆ.

ಅಂಗಾರಕನ ಅಂಗಳಕ್ಕೂ ಹೋಗಿ ಬಂದ ಇಸ್ರೋ

ಅಂಗಾರಕನ ಅಂಗಳಕ್ಕೂ ಹೋಗಿ ಬಂದ ಇಸ್ರೋ

ಇಸ್ರೋ ಚಂದ್ರಯಾನದ ನಂತರ ಮಂಗಳಯಾನವನ್ನು ಸಹ ಮಾಡಿದ್ದು, ಮಾರ್ಸ್‌ ಆರ್ಬಿಟರ್ ಮಿಷನ್‌ ಅಥವಾ ಮಂಗಳಯಾನ ಯೋಜನೆಯನ್ನು ಯಶಸ್ವಿಯಾಗಿ ಅನುಷ್ಟಾನಗೊಳಿಸಿದ ಇಸ್ರೋ ಬಾಹ್ಯಾಕಾಶ ಲೋಕದಲ್ಲಿ ಹೊಸ ಕ್ರಾಂತಿಯನ್ನು ಉಂಟು ಮಾಡಿತು. ನವೆಂಬರ್ 05, 2013ರಲ್ಲಿ ಮಂಗಳಯಾನ ಯೋಜನೆಗೆ ರಾಕೆಟ್ ಉಡಾವಣೆ ಮಾಡಲಾಯಿತು.

Best Mobiles in India

English summary
'Gaganyaan' to take Indian astronaut to space by 2022: PM Modi. To know more this visit kannada.gizbot.com

ಉತ್ತಮ ಫೋನ್‌ಗಳು

ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X