Just In
- 43 min ago
ಸ್ಯಾಮ್ಸಂಗ್ನ ಈ ಹೊಸ ಡಿವೈಸ್ ನೋಡಿದ್ರೆ ನಿಮಗೆ ಏನನ್ನಿಸುತ್ತೆ? ಇದೇನು ಸಾಬೂನಾ?
- 1 hr ago
ಬೆಸ್ಟ್ ಕ್ಯಾಮೆರಾ ಫೋನ್ ಖರೀದಿಸಬೇಕೆ?..ಹಾಗಿದ್ರೆ, ಸ್ವಲ್ಪ ಕಾಯುವುದು ಉತ್ತಮ!
- 1 hr ago
ಫೆಬ್ರವರಿ ತಿಂಗಳಿನಲ್ಲಿ ಅಬ್ಬರಿಸಲಿರುವ ಪ್ರಮುಖ ಸ್ಮಾರ್ಟ್ಫೋನ್ಗಳ ವಿವರ ಇಲ್ಲಿದೆ!
- 2 hrs ago
MusicLM :ಗೂಗಲ್ನಿಂದ ಹೊಸ ಟೂಲ್; ಇದು ಪಠ್ಯವನ್ನು ಸಂಗೀತವಾಗಿ ಪರಿವರ್ತಿಸಲಿದೆ!
Don't Miss
- Sports
Ind vs NZ 3rd T20: ಸರಣಿ ಗೆಲ್ಲುವ ಉತ್ಸಾಹದಲ್ಲಿ ಟೀಂ ಇಂಡಿಯಾ: ಪಿಚ್ ವರದಿ ನೋಡಿ ತಂಡದಲ್ಲಿ ಬದಲಾವಣೆ
- News
ತ್ರಿಪುರಾ ಚುನಾವಣೆ: ಟಿಎಂಸಿ ಅಭ್ಯರ್ಥಿಗಳ ಮೊದಲ ಪಟ್ಟಿ ಬಿಡುಗಡೆ
- Movies
'ಬೆಟ್ಟದ ಹೂ' ಮುಕ್ತಾಯ? ಸುಂದರ ಪಯಣ ನೆನೆದ ನಟ ದರ್ಶಕ್ ಗೌಡ
- Lifestyle
ಒಂಟಿಯಾಗಿ ಅಂಟಾರ್ಟಿಕಾ ಯಾತ್ರೆ ಮಾಡಿದ ಮೊದಲ ಮಹಿಳೆ: ಕ್ಯಾ. ಪ್ರೀತಿ ಚಾಂದಿ, ಇವರ ಸ್ಟೋರಿಯೇ ಸ್ಪೂರ್ತಿದಾಯಕ
- Finance
Budget 2023 Expectations: ಸಾಮಾನ್ಯ ಜನರ ಬಜೆಟ್ ನಿರೀಕ್ಷೆಗಳೇನು?
- Automobiles
ಶೀಘ್ರವೇ ಕಡಿಮೆ ಬೆಲೆಯಲ್ಲಿ ಸಿಗಲಿದೆ ಮಾರುತಿ ಸುಜುಕಿ ಆಲ್ಟೊ ಕೆ10 ಎಕ್ಸ್ಟ್ರಾ ಎಡಿಷನ್
- Education
KVS Recruitment 2022 : ಕೇಂದ್ರೀಯ ವಿದ್ಯಾಲಯ ಸಂಗತನ್ ದಲ್ಲಿ 13404 ಹುದ್ದೆಗಳ ನೇಮಕಾತಿ
- Travel
ಯಾವುದೇ ಚಿಂತೆ ಇಲ್ಲದೆ ಸುಖಕರ ಪ್ರಯಾಣ ಅನುಭವಿಸಲು ಇಲ್ಲಿದೆ ಸಲಹೆಗಳು
ಪಿಎಂ ಕಿಸಾನ್ ಸಮ್ಮಾನ್ ನಿಧಿ ಯೋಜನೆಗೆ ನಿಮ್ಮ ಹೆಸರು ನೋಂದಾಯಿಸುವುದು ಹೇಗೆ?
ರೈತರ ನೆರವಿಗಾಗಿ ಕೇಂದ್ರ ಸರ್ಕಾರ ಹಲವ ಯೋಜನೆಗಳನ್ನು ಜಾರಿಗೊಳಿಸಿದೆ. ಇದರಲ್ಲಿ ಪಿಎಂ ಕಿಸಾನ್ ಸಮ್ಮಾನ್ ನಿಧಿ ಯೋಜನೆ ಕೂಡ ಒಂದಾಗಿದೆ. ಪಿಎಂ ಕಿಸಾನ್ ಸಮ್ಮಾನ್ ನಿಧಿ ಯೋಜನೆ ಅಡಿಯಲ್ಲಿ ನೋಂದಾಯಿಸಿಕೊಂಡ ರೈತರು ಪ್ರತಿ ವರ್ಷ ಆರು ಸಾವಿರ ರೂ.ಗಳ ಸಹಾಯಧನ ಪಡೆದುಕೊಳ್ಳಬಹುದಾಗಿದೆ. ಇನ್ನು ಈ ಆರು ಸಾವಿರ ರೂ.ಗಳನ್ನು ಎರಡು ಸಾವಿರ ರೂ,ಗಳಂತೆ ಮೂರು ಕಂತಿನಲ್ಲಿ ನೇರವಾಗಿ ರೈತರ ಬ್ಯಾಂಕ್ ಖಾತೆಗೆ ಜಮಾ ಮಾಡಲಾಗುತ್ತೆ.

ಹೌದು, ಪಿಎಂ ಕಿಸಾನ್ ಸಮ್ಮಾನ್ ನಿಧಿ ಯೋಜನೆಯಡಿಯಲ್ಲಿ ರೈತರಿಗೆ ಆರು ಸಾವಿರ ರೂ. ಸಹಾಯದನ ದೊರೆಯಲಿದೆ. ಇನ್ನು ಈ ಯೋಜನೆಯಡಿಯಲ್ಲಿ ಹೆಸರು ನೋಂದಾಯಿಸಿಕೊಳ್ಳದ ರೈತರು ಹೊಸದಾಗಿ ನೋಂದಾಯಿಸಿಕೊಳ್ಳುವ ಅವಕಾಶವಿದೆ. ಹೊಸ ರೈತರು ಸೆಪ್ಟೆಂಬರ್ 30 ರ ಮೊದಲು ಪಿಎಂ ಕಿಸಾನ್ ಆಪ್ನಲ್ಲಿ ನೋಂದಾಯಿಸಿಕೊಂಡರೆ ಡಿಸೆಂಬರ್ ಒಳಗೆ 4,000ರೂ.ಗಳ ಸಹಾಯ ಧನ ಪಡೆದುಕೊಳ್ಳಬಹುದಾಗಿದೆ. ಹಾಗಾದ್ರೆ ಪಿಎಂ ಕಿಸಾನ್ ಸಮ್ಮಾನ್ ನಿಧಿ ಯೋಜನೆಗೆ ಹೆಸರು ನೋಂದಾಯಿಸುವುದು ಹೇಗೆ ಅನ್ನೊದನ್ನ ಈ ಲೇಖನದಲ್ಲಿ ತಿಳಿಸಿಕೊಡ್ತೀವಿ ಓದಿರಿ.

2019ರಲ್ಲಿ ಪ್ರಧಾನ ಮಂತ್ರಿ ಕಿಸಾನ್ ಸಮ್ಮಾನ್ ನಿಧಿ ಯೋಜನೆ ಕಾರ್ಯಕ್ರಮವನ್ನು ಆರಂಭಿಸಲಾಗಿದೆ. ಅಂದಿನಿಂದ ಇಂದಿನವರಗೂ 9.75 ಕೋಟಿಗೂ ಹೆಚ್ಚಿನ ರೈತ ಕುಂಟುಬಗಳಿಗೆ ಪ್ರಯೋಜನ ಸಿಕ್ಕಿದೆ. ಇನ್ನು ಈ ಯೋಜನೆಯಲ್ಲಿ ಇಲ್ಲಿಯ ತನಕ ಹೆಸರು ನೋಂದಾಯಿಸಿಕೊಳ್ಳದ ರೈತರು ಈಗ ಹೆಸರನ್ನು ನೋಂದಾಯಿಸಲು ಅವಕಾಶ ನೀಡಲಾಗಿದೆ. ಅದರಲ್ಲೂ ಇದೇ ಸೆಪ್ಟೆಂಬರ್ 30 ರೊಳಗೆ ನೋಂದಾಯಿಸಿಕೊಂಡರೆ ರೈತರು ನೇರವಾಗಿ 4,000ರೂ. ಹಣ ಪಡೆಯಲು ಅರ್ಹರಾಗಿರುತ್ತಾರೆ. ಎರಡು ಕಂತುಗಳ ಹಣವನ್ನು (4 ಸಾವಿರ ರೂಪಾಯಿ) ಒಂದು ಬಾರಿ ಪಡೆಯುವುದಕ್ಕೆ ಅವಕಾಶ ಇದೆ.

ಪಿಎಂ ಕಿಸಾನ್ ಸಮ್ಮಾನ್ ನಿಧಿ ಯೋಜನೆಗೆ ಹೆಸರು ನೋಂದಾಯಿಸುವುದು ಹೇಗೆ?
ಹಂತ:1 ಮೊದಲು ನಿಮ್ಮ ಆಂಡ್ರಾಯ್ಡ್ ಸ್ಮಾರ್ಟ್ಫೋನಿನಲ್ಲಿ PMKISAN GoI ಅಪ್ಲಿಕೇಶನ್ ಡೌನ್ಲೋಡ್ ಮಾಡಿ.
ಹಂತ:2 ನಂತರ ಅಪ್ಲಿಕೇಶನ್ ತೆರೆದು ಹೊಸ ರೈತ ನೋಂದಣಿಯ ಮೇಲೆ ಕ್ಲಿಕ್ ಮಾಡಿ.
ಹಂತ:3 ನೀವು ನಿಮ್ಮ ಆಧಾರ್ ಕಾರ್ಡ್ ಸಂಖ್ಯೆ ಮತ್ತು ಕ್ಯಾಪ್ಚಾ ಕೋಡ್ ಅನ್ನು ಭರ್ತಿ ಮಾಡಬೇಕು.
ಹಂತ:4 ನಂತರ ನಿಮ್ಮ ಹೆಸರು, ವಿಳಾಸ, ಬ್ಯಾಂಕ್ ಖಾತೆ ವಿವರಗಳು, ಐಎಫ್ಎಸ್ಸಿ ಕೋಡ್ ಸೇರಿದಂತೆ ಎಲ್ಲಾ ಅಗತ್ಯ ವಿವರಗಳನ್ನು ನಮೂದಿಸಿರಿ.
ಹಂತ:5 ಎಲ್ಲಾ ವಿವರವನ್ನು ಸಲ್ಲಿಸಿದ ನಂತರ, ನೋಂದಣಿ ಪ್ರಕ್ರಿಯೆ ಪೂರ್ಣಗೊಂಡಿದೆ ಅನ್ನೊದನ್ನ ಗಮನಿಸಿ. ನಂತರ, ಸಲ್ಲಿಸು ಬಟನ್ ಮೇಲೆ ಕ್ಲಿಕ್ ಮಾಡಿ.
ಹಂತ:6 ಈಗ ಅಧಿಕಾರಿಗಳು ನಿಮ್ಮ ಅರ್ಜಿಯನ್ನು ಪರಿಶೀಲಿಸುವವರೆಗೆ ಕಾಯಿರಿ. ಪೂರ್ಣಗೊಂಡ ನಂತರ, ಪ್ರಯೋಜನಗಳನ್ನು ಅರ್ಹ ರೈತರ ಖಾತೆಗೆ ಜಮಾ ಮಾಡಲಾಗುತ್ತದೆ.

ಪಿಎಂ ಕಿಸಾನ್ ಸಮ್ಮಾನ್ ನಿಧಿ ಫಲಾನುಭವಿ ಸ್ಟೇಟಸ್ ಪರಿಶೀಲಿಸುವುದು ಹೇಗೆ?
ಹಂತ:1 ಮೊದಲಿಗೆ https://pmkisan.gov.in/beneficiarystatus.aspx ಲಿಂಕ್ ತೆರೆಯಿರಿ.
ಹಂತ:2 ನಂತರ ನಿಮಗೆ ಕಾಣಿಸುವ ಲಿಂಕ್ ನಲ್ಲಿ, ನಿಮಗೆ ಬೇಕಾದ ಟ್ಯಾಬ್ ಅನ್ನು ಆರಿಸಿ ಮತ್ತು ಅದರ ಮೇಲೆ ಕ್ಲಿಕ್ ಮಾಡಿ.
ಹಂತ:3 ಇದರಲ್ಲಿ ನಿಮ್ಮ ಆಧಾರ್ ಸಂಖ್ಯೆ, ಖಾತೆ ಸಂಖ್ಯೆ, ಮೊಬೈಲ್ ಸಂಖ್ಯೆ ನಮೂದಿಸಿ.
ಹಂತ:4 'ಡೇಟಾ ಪಡೆಯಿರಿ' ಆಯ್ಕೆಯ ಮೇಲೆ ಟ್ಯಾಪ್ ಮಾಡಿ.

ಇನ್ನು ಸರ್ಕಾರ ನಿಗದಿ ಪಡಿಸಿರುವ ದಿನಾಂಕಕ್ಕಿಂತ ಮುಂಚಿತವಾಗಿ ನೋಂದಣಿ ಪೂರ್ಣಗೊಂಡರೆ, PM ಕಿಸಾನ್ ಯೋಜನೆಯಡಿಯಲ್ಲಿ ನವೆಂಬರ್ ತಿಂಗಳೊಳಗೆ 2,000 ಜಮಾ ಆಗಲಿದೆ. ಇನ್ನೊಂದು ಕಂತು 2,000 ಅನ್ನು ಡಿಸೆಂಬರ್ನಲ್ಲಿ ನೇರವಾಗಿ ಖಾತೆಗೆ ತಲುಪಿಸಲಾಗುತ್ತದೆ. ಆ ಮೂಲಕ 4,000ರೂ. ಮೊತ್ತವನ್ನು ಪಡೆದುಕೊಳ್ಳಬಹುದಾಗಿದೆ. ಪ್ರಸ್ತುತ ಆಂಡ್ರಾಯ್ಡ್ ಸ್ಮಾರ್ಟ್ ಫೋನ್ ಗಳಿಗೆ ಮಾತ್ರ ಲಭ್ಯವಿರುವ ಪಿಎಂ ಕಿಸಾನ್ ಯೋಜನೆ ಆಪ್ ಮೂಲಕ ನೀವು ನೇರವಾಗಿ ನೋಂದಣಿಯ ಪ್ರಗತಿಯನ್ನು ಮೇಲ್ವಿಚಾರಣೆ ಮಾಡಬಹುದು.
-
54,999
-
36,599
-
39,999
-
38,990
-
1,29,900
-
79,990
-
38,900
-
18,999
-
19,300
-
69,999
-
79,900
-
1,09,999
-
1,19,900
-
21,999
-
1,29,900
-
12,999
-
44,999
-
15,999
-
7,332
-
17,091
-
29,999
-
7,999
-
8,999
-
45,835
-
77,935
-
48,030
-
29,616
-
57,999
-
12,670
-
79,470