Just In
- 8 hrs ago ರೆಡ್ಮಿಯ ಈ ಮೊಬೈಲ್ಗೆ ಇರುವ ಬಿಗ್ ಆಫರ್ ತಿಳಿದ್ರೆ, ಖಂಡಿತಾ ವಾವ್ ಅಂತೀರಾ!
- 8 hrs ago Google Pixel: ಗೂಗಲ್ ಪಿಕ್ಸೆಲ್ 9 ಪ್ರೊ ಭಾರತಕ್ಕೆ ಯಾವಾಗ ಎಂಟ್ರಿ ಕೊಡಲಿದೆ ಗೊತ್ತಾ? ಬೆಲೆ, ಫೀಚರ್ಸ್ ಬಗ್ಗೆ ತಿಳಿಯಿರಿ
- 10 hrs ago online scam: ಹಾಳಾದ ಹಾಲಿನಿಂದಾಗಿ ಆನ್ಲೈನ್ ಮೂಲಕ 77,000 ರೂ.ಕಳೆದುಕೊಂಡ ಬೆಂಗಳೂರು ಮಹಿಳೆ! ಹೇಗೆ ಗೊತ್ತಾ?
- 11 hrs ago ನಾಳೆ ಸ್ಟೈಲಿಶ್ ರಿಂಗ್ ಡಿಸೈನ್ ಇರುವ ಈ ಫೋನ್ ಖರೀದಿಗೆ ಲಭ್ಯ!..ಬೆಲೆ 6,999ರೂ.!
Don't Miss
- Sports SRH vs MI IPL Match: ಹೈಲೈಟ್ಸ್ ನಂತೆ ಕಂಡ ಲೈವ್ ಮ್ಯಾಚ್: ಮುತ್ತಿನ ನಗರಿಯಲ್ಲಿ ಆರ್ಭಟಿಸಿ ಇತಿಹಾಸದ ಪುಟ ಸೇರಿದ SRH
- Lifestyle ಬೆಂಗಳೂರಿಗರೇ... ನೀರಿನ ಕೊರತೆ ತಪ್ಪಿಸಲು ಈ ಟ್ರಿಕ್ಸ್ ಹಾಗೂ ಟಿಪ್ಸ್ ತುಂಬಾನೇ ಪ್ರಯೋಜನಕಾರಿಯಾಗಿದೆ ನೋಡಿ
- News Chitradurga Lok Sabha Constituency: ಚಿತ್ರದುರ್ಗ ಬಿಜೆಪಿ ಅಭ್ಯರ್ಥಿ ರಾಜಕೀಯ ಹಿನ್ನೆಲೆ ತಿಳಿಯಿರಿ-ಮಾಹಿತಿ, ವಿವರ
- Movies ಪುಷ್ಪ ಪಾತ್ರದಲ್ಲಿ ಕಾಣಿಸಿಕೊಳ್ಳುತ್ತಿರುವ ಕಿರುತೆರೆ ನಟಿ ಅಮೂಲ್ಯ ಬೋಲ್ಡ್ ಫೋಟೋಶೂಟ್ ಹೇಗಿದೆ ನೋಡಿ!
- Finance ಐಟಿಆರ್ ಸಲ್ಲಿಸಿದ್ದರೂ, ಆದಾಯ ತೆರಿಗೆ ಇಲಾಖೆಯಿಂದ ನಿಮಗೆ ಇಮೇಲ್ ಬಂದಿದೆಯೇ?
- Automobiles ಜಿಮ್ನಿಗೆ ಸೆಡ್ಡು ಹೊಡೆಯಲು ಎಂಜಿ ಮಾಸ್ಟರ್ ಪ್ಲಾನ್: ಸದ್ಯದಲ್ಲೇ ಕಾಮೆಟ್ ಆಧರಿಸಿ 5 ಡೋರ್ ಕಾರು ಭಾರತಕ್ಕೆ?
- Education ವರ್ಧಿತ ಉತ್ಪಾದಕತೆಗಾಗಿ ಪ್ರತಿಯೊಬ್ಬರೂ ಕಲಿಯಬೇಕಾದ 10 ಅಗತ್ಯ ಕೌಶಲ್ಯಗಳು
- Travel Bengaluru to Ayodhya: ಬೆಂಗಳೂರಿನಿಂದ ಅಯೋಧ್ಯೆ ತಲುಪುವುದು ಹೇಗೆ? ನೀವಲ್ಲಿ ನೋಡಲೇಬೇಕಿರುವ ಸ್ಥಳಗಳು ಯಾವವು? ಮಾಹಿತಿ
ಆಟೋ, ಟ್ಯಾಕ್ಸಿ ಚಾಲಕರು 3 ಸಾವಿರ ಸಹಾಯಧನಕ್ಕೆ ಅರ್ಜಿಸಲ್ಲಿಸಲು ಹೀಗೆ ಮಾಡಿ!
ಪ್ರಸ್ತುತ ದೇಶದಲ್ಲಿ ಕೊರೊನಾ ಎರಡನೇ ಅಲೆ ವ್ಯಾಪಕವಾಗಿ ಹರಡುತ್ತಿದೆ. ಎರಡನೇ ಅಲೆಯ ತೀವ್ರತೆಯನ್ನು ನಿಯಂತ್ರಿಸಲು ಹಲವು ರಾಜ್ಯಗಳು ಲಾಕ್ಡೌನ್ ಘೊಷಿಸಿವೆ. ಇದರಲ್ಲಿ ಕರ್ನಾಟಕ ರಾಜ್ಯವೂ ಕೂಡ ಒಂದು. ಇನ್ನು ಕರ್ನಾಟಕದಲ್ಲಿ ಈಗಾಗಲೇ ಕೋವಿಡ್ ಎರಡನೇ ಅಲೆಯ ಎರಡನೇ ಹಂತದ ಲಾಕ್ಡೌನ್ ಜಾರಿಯಲ್ಲಿದೆ. ಎರಡನೇ ಅಲೆಯ ಲಾಕ್ಡೌನ್ ಪರಿಣಾಮದಿಂದಾಗಿ ವಿವಿಧ ವಲಯಗಳಲ್ಲಿ ಕೆಲಸ ಮಾಡುವ ಕಾರ್ಮಿಕರು ಸಂಕಷ್ಟಕ್ಕೆ ಎದುರಿಸಿದ್ದು, ಆಟೋ ಮತ್ತು ಟ್ಯಾಕ್ಸಿ ಚಾಲಕರಿಗೂ ಲಾಕ್ಡೌನ್ ಬಿಸಿ ತಟ್ಟಿದೆ. ಈ ನಿಟ್ಟಿನಲ್ಲಿ ಕರ್ನಾಟಕ ಸರ್ಕಾರ ಆಟೋ ಮತ್ತು ಟ್ಯಾಕ್ಸಿ ಚಾಲಕರಿಗೆ 3 ಸಾವಿರ ರೂ. ಪರಿಹಾರ ಘೋಷಣೆ ಮಾಡಿದ್ದು, ಅರ್ಜಿ ಸಲ್ಲಿಸಿ ಹಣ ಪಡೆಯಬಹುದಾಗಿದೆ.
ಹೌದು, ಕೊರೋನಾ ಎರಡನೇ ಅಲೆ ನಿಯಂತ್ರಣಕ್ಕಾಗಿ ಕರ್ನಾಟಕ ರಾಜ್ಯ ಸರ್ಕಾರ ಲಾಕ್ಡೌನ್ ಜಾರಿ ಮಾಡಿದೆ. ಈ ಸಂದರ್ಭದಲ್ಲಿ ಸಂಕಷ್ಟದಲ್ಲಿ ಸಿಲುಕಿರುವ ಆಟೋ, ಟ್ಯಾಕ್ಸಿ, ಕ್ಯಾಬ್ ಚಾಲಕರ ಸಂಕಷ್ಟಕ್ಕೆ 3 ಸಾವಿರ ರೂ ಗಳ ಸಹಾಯಧನ ಘೋಷಿಸಿದೆ. ಇನ್ನು ಚಾಲಕರಿಗೆ ಸರ್ಕಾರ ನೀಡುವ ಸಹಾಯಧನಕ್ಕೆ ಸೇವಾಸಿಂಧು ಮೂಲಕ ಅರ್ಜಿ ಸಲ್ಲಿಸಬೇಕಾಗಿದ್ದು, ಇಂದಿನಿಂದ ಚಾಲಕರು ಅರ್ಜಿ ಸಲ್ಲಿಸಬಹುದಾಗಿದೆ. ಹಾಗಾದ್ರೆ ಸೇವಾ ಸಿಂಧು ವೆಬ್ಸೈಟ್ನಲ್ಲಿ ಅರ್ಜಿ ಸಲ್ಲಿಸುವುದು ಹೇಗೆ ಎಂಬುದನ್ನು ತಿಳಿಯಲು ಮುಂದೆ ಓದಿರಿ.
ಕರ್ನಾಟಕ ಸರ್ಕಾರ ಲಾಕ್ಡೌನ್ ಸಮಸ್ಯೆಗೆ ಒಳಗಾಗಿರುವ ವಿವಿಧ ವಲಯದ ಜನರಿಗೆ ಸಹಾಯಧನ ನೀಡಲು ಆರ್ಥಿಕ ಪ್ಯಾಕೇಜ್ ಘೋಷಣೆ ಮಾಡಿತ್ತು. ಆದರತೆ ಇಂದಿನಿಂದ ಆಟೋ, ಟ್ಯಾಕ್ಸಿ, ಕ್ಯಾಬ್ ಚಾಲಕರು ತಮ್ಮ ಸಹಾಯಧನ ಪಡೆದುಕೊಳ್ಳಲು ಅರ್ಜಿಸಲ್ಲಿಸಬಹುದಾಗಿದೆ. ಇಂದು ಬೆಳಿಗ್ಗೆ 11 ಗಂಟೆಯಿಂದ ಸೇವಾಸಿಂಧು ಪೋರ್ಟಲ್ನಲ್ಲಿ ಅರ್ಜಿ ಸಲ್ಲಿಕೆ ಪ್ರಕ್ರಿಯೆ ಪ್ರಾರಂಭವಾಗಲಿದೆ. ಇನ್ನು ಅರ್ಜಿಸಲ್ಲಿಸುವಾಗ ಕೆಲವೊಂದು ಅರ್ಹ ಮಾನದಂಡಗಳನ್ನು ಪಾಲಿಸಬೇಕಾಗಿದೆ. ಅಗತ್ಯ ದಾಖಲೆಗಳನ್ನು ನೀಡುವುದು ಅವಶ್ಯಕವಾಗಿದೆ.
ಸೇವಾ ಸಿಂಧು ಪೋರ್ಟಲ್ನಲ್ಲಿ ಅರ್ಜಿ ಸಲ್ಲಿಸವುದು ಹೇಗೆ?
ಸೇವಾಸಿಂಧು ಅಪ್ಲಿಕೇಶನ್ನಲ್ಲಿ ಅರ್ಜಿ ಸಲ್ಲಿಸಲು, ಆಟೋ ಡ್ರೈವರ್ಗಳು ಮತ್ತು ಟ್ಯಾಕ್ಸಿ ಡ್ರೈವರ್ಗಳು ಮೊದಲು ಸೇವಾ ಸಿಂದು ಅವರ ಅಧಿಕೃತ ವೆಬ್ಸೈಟ್ಗೆ ಭೇಟಿ ನೀಡಬೇಕಾಗುತ್ತದೆ. ನಂತರ ಅಧಿಕೃತ ಸೇವಾ ಸಿಂದು ವೆಬ್ಸೈಟ್ನ ಮುಖಪುಟದಲ್ಲಿ, "COVID-19 ಗಾಗಿ ಸ್ವಯಂ-ರಿಕ್ಷಾ ಚಾಲಕರು ಮತ್ತು ಟ್ಯಾಕ್ಸಿ ಡ್ರೈವರ್ಗಳಿಗೆ ನಗದು ಪರಿಹಾರ ವಿತರಣೆ" ಆಯ್ಕೆಯನ್ನು ನೀವು ಕಾಣಬಹುದು. ಈ ಆಯ್ಕೆಯ ಮೇಲೆ ಕ್ಲಿಕ್ ಮಾಡಿ, ಮತ್ತು ಚಾಲಕ ನೋಂದಣಿ ಫಾರ್ಮ್ ನಿಮ್ಮ ಕಂಪ್ಯೂಟರ್ ಅಥವಾ ಮೊಬೈಲ್ ಪರದೆಯಲ್ಲಿ ಕಾಣಿಸುತ್ತದೆ. ಅಗತ್ಯವಿರುವ ಎಲ್ಲ ವಿವರಗಳನ್ನು ಅರ್ಜಿ ನಮೂನೆಯಲ್ಲಿ ನಮೂದಿಸಿ. ನಂತರ, ಸಲ್ಲಿಸು ಬಟನ್ ಕ್ಲಿಕ್ ಮಾಡಿ ಮತ್ತು ನಿಮ್ಮ ಅರ್ಜಿ ನಮೂನೆಯ ಪ್ರಿಂಟ್ ತೆಗೆದುಕೊಳ್ಳಬಹುದಾಗಿದೆ.
ಅರ್ಜಿ ಸಲ್ಲಿಸಲು ಬೇಕಾದ ದಾಖಲೆಗಳು
ಪ್ರಯೋಜನಗಳನ್ನು ಪಡೆಯಲು ಅರ್ಜಿದಾರರಿಗೆ ಈ ಯೋಜನೆಯಡಿ ಅರ್ಜಿಯನ್ನು ಸಲ್ಲಿಸಲು ಈ ಕೆಳಗಿನ ದಾಖಲೆಗಳು ಬೇಕಾಗುತ್ತವೆ.
* ಆಧಾರ್ ಸಂಖ್ಯೆ, ಪ್ಯಾನ್ ಸಂಖ್ಯೆ ಲಿಂಕ್ ಆಗಿರುವ ಬ್ಯಾಂಕ್ ಖಾತೆ ವಿವರ.
* ಪಾಸ್ಪೋರ್ಟ್ ಗಾತ್ರದ ಫೋಟೋ
* 2021ರ ಏಪ್ರಿಲ್ 24ರವರೆಗೆ ಚಾಲ್ತಿಯಲ್ಲಿರುವ ಡ್ರೈವಿಂಗ್ ಲೈಸೆನ್ಸ್(ಡಿಎಲ್)
* ವಾಸಸ್ಥಳ ಪ್ರಮಾಣಪತ್ರ
* ವಾಹನ ನೋಂದಣಿ ಪ್ರಮಾಣಪತ್ರ
* ಮತದಾರರ ಗುರುತಿನ ಚೀಟಿ
ಇನ್ನು ಸೇವಾಸಿಂಧುನಲ್ಲಿ ಅರ್ಜಿ ಸಲ್ಲಿಸುವ ಆಟೋ, ಕ್ಯಾಬ್, ಟ್ಯಾಕ್ಸಿ ಚಾಲಕರ ಅರ್ಜಿ ಪರಿಶೀಲಿಸಿದ ನಂತರ ಅವರ ಖಾತೆಗೆ ನೇರ ನಗದು ವರ್ಗಾವಣೆ ಆಗಲಿದೆ.
-
1,29,999
-
22,999
-
64,999
-
99,999
-
29,999
-
39,999
-
-
63,999
-
1,56,900
-
96,949
-
1,39,900
-
1,29,900
-
79,900
-
65,900
-
12,999
-
96,949
-
16,499
-
38,999
-
30,700
-
49,999
-
19,999
-
17,970
-
21,999
-
13,474
-
18,999
-
22,999
-
19,999
-
17,999
-
26,999
-
5,999