ಮೊಬೈಲ್ ಸಂಖ್ಯೆಗೆ ಆಧಾರ್ ಸಂಖ್ಯೆ ಜೋಡಣೆ ಮಾಡಿಸುವುದಿಲ್ಲವೆಂದ ಮುಖ್ಯಮಂತ್ರಿ!!..ಏಕೆ?
ಆಧಾರ್ ಕಡ್ಡಾಯ ನಿಯಯ ವಿರುದ್ಧ ಸಾರ್ವಜನಿಕರು ಪ್ರತಿಭಟನೆ ನಡೆಸಬೇಕೆಂದು ಆಗ್ರಹಿಸಿದ್ದಾರೆ.!!
ಭದ್ರತೆಯ ಸುರಕ್ಷತೆಯಿಂದ ಮೊಬೈಲ್ ಸಂಖ್ಯೆಗೆ ಆಧಾರ್ ಸಂಖ್ಯೆ ಜೋಡಣೆ ಮಾಡಿಸಲೇಬೇಕು ಎಂಬ ಸುಪ್ರೀಕೋರ್ಟ್ ಆದೇಶಕ್ಕೆ ಕೇಂದ್ರಸರ್ಕಾರ ಮೊಬೈಲ್ ಸಂಖ್ಯೆಗೆ ಆಧಾರ್ ಜೋಡಣೆ ಕಾರ್ಯಕ್ಕೆ ಮುಂದಾಗಿತ್ತು. ಆದರೆ, ನನ್ನ ಮೊಬೈಲ್ ಸಂಖ್ಯೆಗೆ ಆಧಾರ್ ಸಂಖ್ಯೆ ಜೋಡಣೆ ಮಾಡಿಸುವುದಿಲ್ಲ ಎಂದು ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಹೇಳಿದ್ದಾರೆ.!!
ಹೌದು, ಕೇಂದ್ರಸರ್ಕಾರ ನಿರಂಕುಶ ಆಡಳಿತ ನಡೆಸುತ್ತಿದೆ. ಮೊಬೈಲ್ ಸಂಖ್ಯೆಗೆ ಆಧಾರ್ ಸಂಖ್ಯೆ ಜೋಡಣೆ ಮಾಡಿಸುವುದರಿಂದ ನಮ್ಮ ಖಾಸಗಿ ಹಕ್ಕಿಗೆ ತೊಂದರೆ ಉಂಟಾಗುತ್ತದೆ ಎಂದು ಮಮತಾ ಬ್ಯಾನರ್ಜಿ ಅವರು ಆರೋಪಿಸಿದ್ದು, ಆಧಾರ್ ಕಡ್ಡಾಯ ನಿಯಯ ವಿರುದ್ಧ ಸಾರ್ವಜನಿಕರು ಪ್ರತಿಭಟನೆ ನಡೆಸಬೇಕೆಂದು ಆಗ್ರಹಿಸಿದ್ದಾರೆ.!!

ಕೋಲ್ಕತ್ತದಲ್ಲಿ ನಡೆದ ಪಕ್ಷದ ಕೋರ್ ಕಮಿಟಿ ಸಭೆಯಲ್ಲಿ ಬುಧವಾರ ಮಾತನಾಡಿದ ಅವರು, ಇದು ನಿರಂಕುಶ ಆಡಳಿತದ ಸೂಚನೆಯಾಗಿದ್ದು, 'ನನ್ನ ಮೊಬೈಲ್ ಸಂಪರ್ಕವನ್ನು ಕಡಿತಗೊಳಿಸಿದರೂ ಪರವಾಗಿಲ್ಲ. ಯಾವುದೇ ಕಾರಣಕ್ಕೂ ನನ್ನ ಮೊಬೈಲ್ ಸಂಖ್ಯೆಗೆ ಆಧಾರ್ ಸಂಖ್ಯೆಯನ್ನು ಜೋಡಣೆ ಮಾಡಿಸುವುದಿಲ್ಲ'. ಎಂದಿದ್ದಾರೆ.!!

ಹೊಸ ಮೊಬೈಲ್ ಸಿಮ್ಸಂಪರ್ಕ ಪಡೆಯಲು ಬಯಸುವವರು ಇನ್ಮುಂದೆ ಆಧಾರ್ ಆಧಾರಿತ ವಿದ್ಯುನ್ಮಾನ-ದೃಢೀಕರಣ (ಇ-ಕೆವೈಸಿ:) ಅರ್ಜಿಯನ್ನು ಭರ್ತಿ ಮಾಡಬೇಕಾಗುತ್ತದೆ ಎಂದು ಟೆಲಿಕಾಂ ಇಲಾಖೆ ಹೊಸ ನಿಯಮವನ್ನು ಜಾರಿಗೊಳಿಸಿರುವ ಕುರಿತು ಮಮತಾ ಬ್ಯಾನರ್ಜಿ ಟೀಕೆಮಾಡಿದರು.
ಓದಿರಿ: ಟೆಲಿಕಾಂ ಕಂಪೆನಿಗಳಿಗೆ ಸರ್ಕಾರದಿಂದ ಮತ್ತೊಂದು ಶಾಕ್!..ಗ್ರಾಹಕರಿಗೆ ವರದಾನ!!


Click it and Unblock the Notifications