Just In
- 13 hrs ago Samsung: ಸ್ಯಾಮ್ಸಂಗ್ನ ಈ ಸರಣಿ ಫೋನ್ಗಳಲ್ಲಿ ಗ್ರೀನ್ ಲೈನ್ ಸಮಸ್ಯೆ! ವರದಿ
- 14 hrs ago ಬಜೆಟ್ ಬೆಲೆಗೆ ಲಭ್ಯವಿರುವ ಈ ಫೋನ್ಗಳ ಫೀಚರ್ಸ್ ತಿಳಿದ್ರೆ, ವಾವ್ ಅಂತೀರಾ!
- 15 hrs ago ಬೋರಿಂಗ್ ಫೋನ್ಗಾಗಿ ಕೈಜೋಡಿಸಿದ HMD, ಹೈನೆಕೆನ್ ಮತ್ತು ಬೊಡೆಗಾ! ಯಾತಕ್ಕಾಗಿ ಈ ಫೋನ್?
- 16 hrs ago ಸದ್ಯ ನೀವೇನಾದರೂ ಹೊಸ ರೆಡ್ಮಿ ಫೋನ್ ಖರೀದಿಸ್ತೀರಾ?..ಹಾಗಿದ್ರೆ, ಇಲ್ಲಿ ಗಮನಿಸಿ!
Don't Miss
- News 21 ರಾಜ್ಯ, 102 ಲೋಕಸಭಾ ಸ್ಥಾನ, 1625 ಅಭ್ಯರ್ಥಿಗಳ ಭವಿಷ್ಯ ನಿರ್ಧರಿಸಲು ಮತದಾರ ಪ್ರಭು ಸಿದ್ಧ!
- Movies 'ಮಾರ್ಟಿನ್' ಚಿತ್ರದ ನಿರ್ಮಾಪಕ- ನಿರ್ದೇಶಕರ ಮಧ್ಯೆ ಕಿರಿಕ್: ಕೊನೆಗೂ ಸಿಕ್ತು ಸ್ಪಷ್ಟನೆ
- Sports RCB vs KKR IPL 2024: ಕೆಕೆಆರ್ ವಿರುದ್ಧ ಆರ್ಸಿಬಿ ಹಸಿರು ಜೆರ್ಸಿಯಲ್ಲಿ ಕಣಕ್ಕೆ; ಅಂದೇ ಏಕೆ?
- Lifestyle ಮನೆಯಲ್ಲಿ ಸುಲಭವಾಗಿ ಬೀನ್ಸ್ ಬೆಳೆಯಬಹುದು..! ಹೇಗೆ ನೋಡಿ..!
- Automobiles ಎಲೆಕ್ಟ್ರಿಕ್ ಕಾರು ಖರೀದಿಸಿ ಪರಿಸರ ಪ್ರೇಮ ಮೆರೆದ ನಟಿ: ಬೆಲೆ ಕೇಳಿದ್ರೆ ತಲೆ ತಿರುಗುತ್ತೆ!
- Finance ಬಿಸಿಲ ಬೇಗೆಯಿಂದ ರಕ್ಷಿಸಿಕೊಳ್ಳಲು ಟ್ರಾಫಿಕ್ ಪೊಲೀಸರಿಗೆ ರಿಲಿಫ್: ಬಂತು ಹವಾನಿಯಂತ್ರಿತ ಎಸಿ ಹೆಲ್ಮೆಟ್!
- Education ವರ್ಧಿತ ಉತ್ಪಾದಕತೆಗಾಗಿ ಪ್ರತಿಯೊಬ್ಬರೂ ಕಲಿಯಬೇಕಾದ 10 ಅಗತ್ಯ ಕೌಶಲ್ಯಗಳು
- Travel Bengaluru to Ayodhya: ಬೆಂಗಳೂರಿನಿಂದ ಅಯೋಧ್ಯೆ ತಲುಪುವುದು ಹೇಗೆ? ನೀವಲ್ಲಿ ನೋಡಲೇಬೇಕಿರುವ ಸ್ಥಳಗಳು ಯಾವವು? ಮಾಹಿತಿ
ಫೇಸ್ಬುಕ್ ಕಾಮೆಂಟ್: ಬಂಧನಕ್ಕೆ ಹಿರಿಯ ಅಧಿಕಾರಿ ಅನುಮತಿ ಅಗತ್ಯ
ಫೇಸ್ಬುಕ್, ಟ್ವೀಟರ್ನಂತಹಹ ಸಾಮಾಜಿಕ ಜಾಲ ತಾಣಗಳಲ್ಲಿ ಆಕ್ಷೇಪಾರ್ಹ ಅನಿಸಿಕೆಗಳನ್ನು ವ್ಯಕ್ತಪಡಿಸಿದ ವ್ಯಕ್ತಿಯನ್ನು ಹಿರಿಯ ಪೊಲೀಸ್ ಅಧಿಕಾರಿಗಳ ಅನುಮತಿಯಿಲ್ಲದೇ ಯಾವುದೇ ಕಾರಣಕ್ಕೆ ಬಂಧಿಸಬಾರದು ಎಂದು ಸುಪ್ರೀಂ ಕೋರ್ಟ್ ನಿರ್ದೇಶನ ನೀಡಿದೆ.
ಸಾಮಾಜಿಕ ಜಾಲ ತಾಣಗಳಲ್ಲಿ ಆಕ್ಷೇಪಾರ್ಹ ಕಾಮೆಂಟ್ಗಳನ್ನು ಬರೆದಿದ್ದಕ್ಕಾಗಿ ವ್ಯಕ್ತಿಯನ್ನು ಬಂಧಿಸಬಾರದು ಎಂಬ ಕೋರಿಕೆಯನ್ನು ತಳ್ಳಿಹಾಕಿದ ಸುಪ್ರೀಂ ಕೋರ್ಟ್, ಕೇಂದ್ರ ಸರಕಾರವು ಜನವರಿ 9ರಂದು ನೀಡಿದ ನಿರ್ದೇಶನವನ್ನು ಪಾಲಿಸುವಲ್ಲಿ ರಾಜ್ಯ ಸರಕಾರಗಳು ಬದ್ಧವಾಗಿರಬೇಕು ಎಂದು ತಿಳಿಸಿದೆ.
ನ್ಯಾಯಮೂರ್ತಿಗಳಾದ ಬಿ.ಎಸ್.ಚೌಹಾಣ್ ಹಾಗೂ ದೀಪಕ್ ಮಿಶ್ರಾ ಅವರನ್ನೊಳಗೊಂಡ ನ್ಯಾಯಪೀಠವು ಈ ನಿರ್ದೇಶನ ನೀಡಿದ್ದು ಮಾಹಿತಿ ತಂತ್ರಜ್ಞಾನ ಕಾಯ್ದೆಯ 66ಎ ವಿಧಿಯ ಸಾಂವಿಧಾನಿಕ ಸಿಂಧುತ್ವವನ್ನು ಸುಪ್ರೀಂಕೋರ್ಟ್ ಪರಾಮರ್ಶಿಸುತ್ತಿದೆ. ಅಲ್ಲದೇ ಈ ರೀತಿಯ ಪ್ರಕರಣಗಳಲ್ಲಿ ವ್ಯಕ್ತಿಯ ಬಂಧನಕ್ಕೆ ನಿಷೇಧ ಹೇರುವ ಬಗ್ಗೆ ತೀರ್ಪು ನೀಡಲಾಗದು ಎಂದು ಪೀಠ ಹೇಳಿದೆ.
ಫೇಸ್ಬುಕ್ನಲ್ಲಿ ಕಾಮೆಂಟ್ ಹಾಕಿದ ಹಾಗೂ ಲೈಕ್ ಮಾಡಿದ ಯುವತಿಯರನ್ನು ಇತ್ತೀಚೆಗೆ ಬಂಧಿಸಿರುವುದು ದೇಶಾದ್ಯಂತ ಜನಾಕ್ರೋಶಕ್ಕೆ ಕಾರಣವಾದ ಹಿನ್ನೆಲೆಯಲ್ಲಿ ಕೇಂದ್ರವು, ಹಿರಿಯ ಪೊಲೀಸ್ ಅಧಿಕಾರಿಗಳ ಅನುಮತಿಯಿಲ್ಲದೆ ಬಂಧನ ನಡೆಸುವಂತಿಲ್ಲ ಎಂದು ಜನವರಿ 9ರಂದು ರಾಜ್ಯ ಸರಕಾರಗಳಿಗೆ ನಿರ್ದೇಶನ ನೀಡಿತ್ತು.
ಶಿವಸೇನೆಯ ನಾಯಕ ಬಾಳ್ ಠಾಕ್ರೆ ಅವರ ಅಂತಿಮ ಯಾತ್ರೆಯನ್ನು ಆಕ್ಷೇಪಿಸಿ ಫೇಸ್ಬುಕ್ಗೆ ಹೇಳಿಕೆಗಳನ್ನು ಹಾಕಿದ ಆರೋಪದಲ್ಲಿ ಸೆರೆಯಾಗಿದ್ದ ಥಾಣೆ ಜಿಲ್ಲೆಯ ಪಾಲ್ಘರ್ನ ಶಹೀನ್ ಧಾಡ ಮತ್ತು ರಿನು ಶ್ರೀನಿವಾಸನ್ ಎನ್ನುವ ಯುವತಿಯರನ್ನು ಪೊಲೀಸರು ಬಂಧಿಸಿದಾಗ ಜಯಾ ವಿಂಧ್ಯಾಲ್ ಪಿಐಎಲ್ ದಾಖಲಿಸಿದ್ದರು.
ಇದನ್ನೂ ಓದಿ : ಫೇಸ್ಬುಕ್ ಬಳಸುವಾಗ ಇರಲಿ ಎಚ್ಚರ
-
1,29,999
-
22,999
-
64,999
-
99,999
-
29,999
-
39,999
-
-
63,999
-
1,56,900
-
96,949
-
1,39,900
-
1,29,900
-
79,900
-
65,900
-
12,999
-
96,949
-
16,499
-
38,999
-
30,700
-
49,999
-
19,999
-
17,970
-
21,999
-
13,474
-
18,999
-
22,999
-
19,999
-
17,999
-
26,999
-
5,999