Home
ಸುದ್ದಿಜಾಲ

'ಕಂಪ್ಯೂಟರ್, ಕನ್ನಡ ಮತ್ತು ಕೆ. ಪಿ. ರಾವ್' ಪುಸ್ತಕ ಲೋಕಾರ್ಪಣೆ

By Ashwath

ಕನ್ನಡ ವಿಶ್ವವಿದ್ಯಾನಿಲಯದಿಂದ ಇತ್ತೀಚೆಗೆ 'ನಾಡೋಜ' ಗೌರವ ಪಡೆದ, ಭಾರತೀಯ ಭಾಷೆಗಳಲ್ಲಿ ಕಂಪ್ಯೂಟಿಂಗ್ ಕ್ಷೇತ್ರದ ಪಿತಾಮಹರೆಂದೇ ಪ್ರಸಿದ್ದರಾದ.ಕೆ.ಪಿ.ರಾವ್‌ ಬಗ್ಗೆ ಟಿ.ಜಿ.ಶ್ರೀನಿಧಿ ಬರೆದ ಪುಸ್ತಕ ಬಿಡುಗಡೆಯಾಗಿದೆ.
ಅವರ ಜೀವನ-ಸಾಧನೆಯನ್ನು ಸಂಕ್ಷಿಪ್ತವಾಗಿ ಪರಿಚಯಿಸುವ 'ಕಂಪ್ಯೂಟರ್, ಕನ್ನಡ ಮತ್ತು ಕೆ. ಪಿ. ರಾವ್'ಪುಸ್ತಕ ಹೊರಬಂದಿದ್ದು ಇಜ್ಞಾನ ಡಾಟ್ ಕಾಮ್‌ನ ಟಿ. ಜಿ. ಶ್ರೀನಿಧಿ ಬರೆದ ಈ ಪುಸ್ತಕವನ್ನು ಬೆಂಗಳೂರಿನ ಉದಯಭಾನು ಕಲಾಸಂಘ ಪ್ರಕಟಿಸಿದೆ.

'ಕಂಪ್ಯೂಟರ್, ಕನ್ನಡ ಮತ್ತು ಕೆ. ಪಿ. ರಾವ್' ಪುಸ್ತಕ ಲೋಕಾರ್ಪಣೆ

ಕೆ.ಪಿ.ರಾವ್‌ ಯಾರು ?
ಪ್ರಶಸ್ತಿಗಳಿಂದ ದೂರವಿರುವ ಕೆ. ಪಿ. ರಾವ್, ಭಾರತೀಯ ಭಾಷೆಗಳಲ್ಲಿ ಕಂಪ್ಯೂಟಿಂಗ್ ಕ್ಷೇತ್ರದ ಪಿತಾಮಹರೆಂದೇ ಪ್ರಸಿದ್ಧರು. ಈಗ ವ್ಯಾಪಕವಾಗಿ ಬಳಕೆಯಲ್ಲಿರುವ ಕರ್ನಾಟಕ ಸರ್ಕಾರದ ಅಧಿಕೃತ ಕೀಲಿಮಣೆ ವಿನ್ಯಾಸವನ್ನು ('ನುಡಿ' ವಿನ್ಯಾಸ) ರೂಪಿಸಿದ್ದು ಶ್ರೀ ಕೆ. ಪಿ. ರಾವ್ . ಕನ್ನಡದ ಪದಸಂಸ್ಕಾರಕ ತಂತ್ರಾಂಶ 'ಸೇಡಿಯಾಪು' ರಚಿಸಿ ಮುಕ್ತ ಬಳಕೆಗೆ ನೀಡಿದ ಹಿರಿಮೆ ಕೆ.ಪಿ.ರಾಯರಿಗೆ ಸಲ್ಲುತ್ತದೆ. ಉಚ್ಚಾರಣಾತ್ಮಕ ತರ್ಕ ಬಳಸಿದ ಮೊದಲ ಕೀಬೋರ್ಡ್ ವಿನ್ಯಾಸದ ಸೃಷ್ಟಿ ಇವರದೇ ಸಾಧನೆ. ಮುಂದೆ ಇದೇ ತರ್ಕ ಬಳಸಿ ಅವರು ಕನ್ನಡದ ಕೀಬೋರ್ಡ್ ವಿನ್ಯಾಸ ತಯಾರಿಸಿದರು.

ಈ ಪುಸ್ತಕ ದೊರೆಯುವ ಸ್ಥಳ:
ಉದಯಭಾನು ಕಲಾಸಂಘದ ಸಾಂಸ್ಕೃತಿಕ ಭವನ
ರಾಮಕೃಷ್ಣಮಠ ಬಡಾವಣೆ
ಕೆಂಪೇಗೌಡನಗರ, ಬೆಂಗಳೂರು- 19 (ಬಸವನಗುಡಿ ರಸ್ತೆ, ರಾಮಕೃಷ್ಣಮಠ ಹಿಂಭಾಗ)
ಬೆಲೆ: 45 ರೂಪಾಯಿ

Best Mobiles in India

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+