Just In
- 10 hrs ago ಅಗ್ಗದ ಬೆಲೆಯಲ್ಲಿ ಎಂಟ್ರಿ ಕೊಡಲು ಸಜ್ಜಾಗಿದೆ ಐಟೆಲ್ S24 ಸ್ಮಾರ್ಟ್ಫೋನ್!
- 12 hrs ago oneplus: ಒನ್ಪ್ಲಸ್ನಿಂದ ಫ್ಲ್ಯಾಗ್ಶಿಪ್ ಕ್ಯಾಮೆರಾ ಸೌಲಭ್ಯದೊಂದಿಗೆ ಫ್ಲಿಪ್ ಫೋನ್!
- 14 hrs ago ವಿವೋ V30e ಸ್ಮಾರ್ಟ್ಫೋನ್ ಲಾಂಚ್ಗೆ ದಿನಾಂಕ ಫಿಕ್ಸ್! ಬೆಲೆ, ಕ್ಯಾಮೆರಾ, ವಿನ್ಯಾಸ ವಿವರ ಇಲ್ಲಿದೆ..
- 14 hrs ago Itel: ಐಟೆಲ್ ಸೂಪರ್ ಗುರು 4G ಫೋನ್ ಲಾಂಚ್! ಯುಪಿಐ ಬೆಂಬಲ
Don't Miss
- News Rain Alert: ರಾಜ್ಯಾದ್ಯಂತ ಹಲವು ಜಿಲ್ಲೆಗಳಲ್ಲಿ ವ್ಯಾಪಕ ಮಳೆ; ಜಿಲ್ಲಾವಾರು ಮಳೆ ವಿವರ
- Lifestyle ಜೀವ ಸಂಗಾತಿಗೆ ಹುಟ್ಟು ಹಬ್ಬದಂದು ವಿಶ್ ಮಾಡಲು ಸುಂದರ ಸಾಲುಗಳ ಗ್ರೀಟಿಂಗ್ಸ್ ಇಲ್ಲಿದೆ
- Movies ಡಿ. ಕೆ ಸುರೇಶ್ ಪರ ನಟ ದರ್ಶನ್ ಪ್ರಚಾರ; ಆ 2 ವಿಧಾನಸಭಾ ಕ್ಷೇತ್ರಗಳಲ್ಲಿ ಮತಬೇಟೆ
- Sports ಆರ್ಸಿಬಿಗೆ ಸಹಿ ಹಾಕಲು ವಿರಾಟ್ ಕೊಹ್ಲಿ ಕೇಳಿದ್ದೇಗೆ?; ಕುತೂಹಲಕಾರಿ ಕಥೆ ಬಿಚ್ಚಿಟ್ಟ ಕೆಎಲ್ ರಾಹುಲ್
- Automobiles ಟಾಟಾ ಕಾರುಗಳಂತೆಯೇ ಗರಿಷ್ಠ ಸುರಕ್ಷತೆ ತೋರಿದ ಸ್ವಿಫ್ಟ್: ಕ್ರ್ಯಾಶ್ ಟೆಸ್ಟ್ನಲ್ಲಿ 4 ಸ್ಟಾರ್
- Finance n. r. narayana murthy ಐದು ತಿಂಗಳ ಮೊಮ್ಮಗನಿಗೆ 4.2 ಕೋಟಿ ಇನ್ಫೋಸಿಸ್ ಲಾಭ
- Education ವರ್ಧಿತ ಉತ್ಪಾದಕತೆಗಾಗಿ ಪ್ರತಿಯೊಬ್ಬರೂ ಕಲಿಯಬೇಕಾದ 10 ಅಗತ್ಯ ಕೌಶಲ್ಯಗಳು
- Travel Bengaluru to Ayodhya: ಬೆಂಗಳೂರಿನಿಂದ ಅಯೋಧ್ಯೆ ತಲುಪುವುದು ಹೇಗೆ? ನೀವಲ್ಲಿ ನೋಡಲೇಬೇಕಿರುವ ಸ್ಥಳಗಳು ಯಾವವು? ಮಾಹಿತಿ
ತಂತ್ರಜ್ಞಾನ ಕ್ಷೇತ್ರದಲ್ಲಿ ಭಾರತದ ಭವಿಷ್ಯವನ್ನು ಮೊದಲೇ ನೋಡಿದ್ದ 'ಭಾರತ ರತ್ನ'!!
ಭಾರತೀಯ ರಾಜಕೀಯ ರಂಗದ 'ಭಾರತ ರತ್ನ' ಎಂದೇ ಕರೆಸಿಕೊಳ್ಳುವ ಮಾಜಿ ಪ್ರಧಾನಮಂತ್ರಿ ಅಟಲ್ ಬಿಹಾರಿ ವಾಜಪೇಯಿ ಅವರ ಪರಿಶ್ರಮವಿಲ್ಲದಿದ್ದರೆ, ವಿಶ್ವ ಮಾಹಿತಿ ತಂತ್ರಜ್ಞಾನದ ಬೆನ್ನೆಲುಬು ಎಂದು ಕರೆಸಿಕೊಳ್ಳುವ ಭಾರತದ ಐಟಿ ಉದ್ಯಮ ಇಂದು ಈ ರೀತಿ ಇರುತ್ತಿರಲಿಲ್ಲ. ದೇಶದ ತಂತ್ರಜ್ಞಾನ ಕ್ಷೇತ್ರಕ್ಕೆ ವಾಜಪೇಯಿ ಅವರು ನೀಡಿದ ಕೊಡುಗೆಯ ಫಲವಾಗಿಯೇ ಭಾರತವಿಂದು ವಿಶ್ವ ಮಾಹಿತಿ ತಂತ್ರಜ್ಞಾನ ಕ್ಷೇತ್ರದಲ್ಲಿ ದಿಗ್ಗಜನಾಗಿ ಭದ್ರವಾಗಿ ತಳವೂರಲು ಸಾಧ್ಯವಾಗಿದೆ ಎಂಬುದು ಬಹುತೇಕರಿಗೆ ತಿಳಿದಿಲ್ಲ.
ಹೌದು, ರಾಜಕೀಯ ನಿಪುಣರಾಗಿ ಇಡೀ ವಿಶ್ವವೇ ಭಾರತದತ್ತ ತಿರುಗಿ ನೋಡುವಂತೆ ಮಾಡಿದ್ದ ಅಟಲ್ ಬಿಹಾರಿ ವಾಜಪೇಯಿ ಅವರು ತಂತ್ರಜ್ಞಾನ ಕ್ಷೇತ್ರವನ್ನು ಭಾರತದ ಭವಿಷ್ಯವನ್ನಾಗಿ ನೋಡಿದ್ದರು. ಹಾಗಾಗಿಯೇ, ದೇಶದ ಒಟ್ಟು ಸ್ಥಳೀಯ ಆದಾಯದ (ಜಿಡಿಪಿ) ಪ್ರತಿಶತ 2 ರಷ್ಟನ್ನಾದರೂ ವಿಜ್ಞಾನ ಮತ್ತು ತಂತ್ರಜ್ಞಾನ ಕ್ಷೇತ್ರಕ್ಕೆ ವಿನಿಯೋಗಿಸುವುದಾಗಿ ಸಂಕಲ್ಪ ತೊಟ್ಟ ಮೊದಲ ಪ್ರಧಾನಿ ಅವರು 2003ರಲ್ಲೇ ವಿಜ್ಞಾನ ಮತ್ತು ತಂತ್ರಜ್ಞಾನ ನೀತಿ- 2003ರ ಸಂಕ್ಷಿಪ್ತ ವಿವರ ನೀಡಿದ್ದರು.!
2003ರಲ್ಲಿ ನಡೆದಿದ್ದ ತೊಂಬತ್ತನೇ ಅಖಿಲ ಭಾರತ ವಿಜ್ಞಾನ ಮೇಳ ಉದ್ಘಾಟಿಸಿ ಹೊಸ ವಿಜ್ಞಾನ ಮತ್ತು ತಂತ್ರಜ್ಞಾನ ನೀತಿಯನ್ನು ಪ್ರಕಟಿಸಿದ್ದ ವಾಜಪೇಯಿ ಅವರು, ಈ ಹೊಸ ನೀತಿಯಿಂದ ಬಡತನ ಮತ್ತು ಪ್ರಾದೇಶಿಕ ಅಸಮತೋಲನವನ್ನು ನೇರವಾಗಿ ಕಿತ್ತೊಗೆಯುವ ಶಕ್ತಿ ವಿಜ್ಞಾನ ಮತ್ತು ತಂತ್ರಜ್ಞಾನಕ್ಕೆ ದಕ್ಕಲಿದೆ. ವಿಜ್ಞಾನ ಮತ್ತು ತಂತ್ರಜ್ಞಾನ ಅಧಿಕಾರಶಾಹಿ ರಹಿತವಾಗಿ ರೂಪುಗೊಳ್ಳಲಿದೆ. ಎಂಬ ಮಾತುಗಳನ್ನು ಭಾರತೀಯ ತಂತ್ರಜ್ಞಾನ ಕ್ಷೇತ್ರ ಎಂದೂ ಮರೆಯಲು ಸಾಧ್ಯವಿಲ್ಲ. ಏಕೆಂದರೆ, ಅವರ ಮಾತು ಈಗ ನಿಜವಾಗಿದೆ.
1983ರ ನಂತರ ವಿಜ್ಞಾನ ಮತ್ತು ತಂತ್ರಜ್ಞಾನ ನೀತಿಯನ್ನು 2003ರಲ್ಲಿ ಜಾರಿಗೆ ತಂದ ವಾಜಪೇಯಿ ಅವರು, ನೈಸರ್ಕಿಕ ಶಕ್ತಿಯನ್ನು ಸಮರ್ಪಕವಾಗಿ ಬಳಸಿಕೊಂಳ್ಳುವ, ಪರಿಸರಕ್ಕೂ ಪೆಟ್ಟು ಕೊಡದಂತೆ ಅಭಿವೃದ್ಧಿ ಹೊಂದಿದ ತಂತ್ರಜ್ಞಾನದ ಅವಶ್ಯಕತೆಯಿದೆ. ಇದನ್ನು ಕಟ್ಟಿಕೊಡುವುದು ವಿಜ್ಞಾನಿಗಳ ಹೊಣೆಯಾಗಬೇಕು. ಜೈವಿಕ ತಂತ್ರಜ್ಞಾನ, ಮಾಹಿತಿ ತಂತ್ರಜ್ಞಾನ ಹಾಗೂ ಬಾಹ್ಯಾಕಾಶ ತಂತ್ರಜ್ಞಾನದಲ್ಲಿನ ಹೊಸ ಆವಿಷ್ಕಾರಗಳನ್ನು ವಿವಿಧ ಕ್ಷೇತ್ರಗಳ ಯಶಸ್ಸಿಗೆ ಸಮರ್ಪಕವಾಗಿ ಬಳಸಿಕೊಳ್ಳಬೇಕು ಎಂದು ಅಂದಿನ ಭಾಷಣದಲ್ಲಿ ಹೇಳಿದ್ದರು.
ಗ್ರಾಮೀಣ ಪ್ರದೇಶಗಳ ಆರ್ಥಿಕ ಸ್ಥಿತಿ ಸುಧಾರಣೆಗೆ ಒತ್ತು ಕೊಡುವಂತಹ ಆವಿಷ್ಕಾರಗಳಿಗೆ ವಿಜ್ಞಾನ ಸಮುದಾಯ ಮೊದಲ ಆದ್ಯತೆ ಕೊಡಬೇಕು. ತಂತ್ರಜ್ಞಾನ ಕ್ಷೇತ್ರದ ಸಂಶೋಧನೆಗಳಲ್ಲಿ ವಯಸ್ಸು ಆಧರಿಸಿ ಬಡ್ತಿ ಕೊಡುವ ಪ್ರಕ್ರಿಯೆಯನ್ನು ನಿಲ್ಲಿಸಬೇಕು ಎಂದು ಸರಿಸುಮಾರು 15 ವರ್ಷಗಳ ಹಿಂದೆಯೇ ಪ್ರಸ್ತಾಪಿಸಿದ್ದ ವಾಜಪೇಯಿ ಅವರು ವಿಜ್ಞಾನ ಕ್ಷೇತ್ರದ ಸಾಧಕರಿಗೆ ಪ್ರತಿವರ್ಷ 25 ಲಕ್ಷ ರುಪಾಯಿ ಮೊತ್ತದ ಪ್ರಶಸ್ತಿ ಕೊಡುವುದಾಗಿ ಘೋಷಿಸಿದ್ದನ್ನು ನೋಡಿ ಅಂದಿನ ವಿಜ್ಞಾನ ಸಮೂಹವೇ ಬಾಯಲ್ಲಿ ಬೆರಳಿಟ್ಟು ನೋಡಿತ್ತು.
-
1,29,999
-
22,999
-
64,999
-
99,999
-
29,999
-
39,999
-
-
63,999
-
1,56,900
-
96,949
-
1,39,900
-
1,29,900
-
79,900
-
65,900
-
12,999
-
96,949
-
16,499
-
38,999
-
30,700
-
49,999
-
19,999
-
17,970
-
21,999
-
13,474
-
18,999
-
22,999
-
19,999
-
17,999
-
26,999
-
5,999