Just In
- 35 min ago Realme: ರಿಯಲ್ಮಿ ನಾರ್ಜೋ 70x 5G ಸ್ಮಾರ್ಟ್ಫೋನ್ ಲಾಂಚ್ಗೆ ದಿನಗಣನೆ! ಅಮೋಲೆಡ್ ಡಿಸ್ಪ್ಲೇ ಆಯ್ಕೆ
- 1 hr ago ನೀವು ಜಿಯೋ ಗ್ರಾಹಕರೇ?..ಹಾಗಿದ್ರೆ, ಈ ಪ್ಲ್ಯಾನಿಗೆ ಖಂಡಿತಾ ಫಿದಾ ಆಗ್ತೀರಾ!
- 3 hrs ago Vivo: ಭಾರತದಲ್ಲಿ ವಿವೋ T3x 5G ಸ್ಮಾರ್ಟ್ಫೋನ್ ಲಾಂಚ್! ಫೀಚರ್ಸ್ ಏನು?, ಬೆಲೆ ಎಷ್ಟು?
- 5 hrs ago HMD ಪಲ್ಸ್ ನ ಕಲರ್ ಹಾಗೂ ಫೀಚರ್ಸ್ ಲೀಕ್! ಶೀಘ್ರದಲ್ಲೇ ಲಾಂಚ್...
Don't Miss
- Lifestyle ಇದು ಮಾಮೂಲಿ ರೈಸ್ ಅಲ್ಲ..ತೆಂಗಿನಕಾಯಿ ರೈಸ್..! ಮಾಡೋದು ಸುಲಭ.!
- Sports T20 World Cup: ಆರಂಭಿಕ ಸ್ಥಾನಕ್ಕಾಗಿ ಯಶಸ್ವಿ ಜೈಸ್ವಾಲ್, ಶುಭ್ಮನ್ ಗಿಲ್ ಪೈಪೋಟಿ
- News Tejasvi Surya V/s Sowmya Reddy: ಬೆಂಗಳೂರು ದಕ್ಷಿಣವೆಂಬ ಬ್ರಾಹ್ಮಣ ಸಾಮ್ರಾಜ್ಯದಲ್ಲಿ ಹೊಸ ದಾಖಲೆ ಬರೆಯುತ್ತಾರಾ ಸೌಮ್ಯ ರೆಡ್ಡಿ
- Movies ಚಿಕ್ಕ ವಯಸ್ಸಿನಲ್ಲಿಯೇ ಕೊನೆಯುಸಿರೆಳೆದ ಆ್ಯಂಗ್ರಿ ರ್ಯಾಂಟ್ಮ್ಯಾನ್ ; ಪ್ರಖ್ಯಾತ ಯುಟ್ಯೂಬರ್ಗೆ ಏನಾಗಿತ್ತು..?
- Automobiles 150KM ರೇಂಜ್, ಸುರಕ್ಷತೆಯ ಮೆಟಲ್ ಬಾಡಿಯ ಮಹಿಂದ್ರಾ ಎಲೆಕ್ಟ್ರಿಕ್ ಆಟೋ ಬಿಡುಗಡೆ: ಹೆಚ್ಚು ಲಾಭ
- Finance ದೀಪಿಕಾ ಪಡುಕೋಣೆಯೊಂದಿಗೆ ಅಂಬಾನಿ ಮಗಳು ಒಪ್ಪಂದ, ಇಲ್ಲಿದೆ ವಿವರ
- Education ವರ್ಧಿತ ಉತ್ಪಾದಕತೆಗಾಗಿ ಪ್ರತಿಯೊಬ್ಬರೂ ಕಲಿಯಬೇಕಾದ 10 ಅಗತ್ಯ ಕೌಶಲ್ಯಗಳು
- Travel Bengaluru to Ayodhya: ಬೆಂಗಳೂರಿನಿಂದ ಅಯೋಧ್ಯೆ ತಲುಪುವುದು ಹೇಗೆ? ನೀವಲ್ಲಿ ನೋಡಲೇಬೇಕಿರುವ ಸ್ಥಳಗಳು ಯಾವವು? ಮಾಹಿತಿ
ಭಾರತೀಯ ಗಗನಯಾತ್ರಿಗಳಿಗೆ ರಷ್ಯಾ ತರಬೇತಿ?!..ಭಾರತಕ್ಕಿನ್ನು ಆನೆ ಬಲ!!
2022ರ ವೇಳೆಗೆ ಭಾರತ ಮಾನವ ಸಹಿತ ಗಗನಯಾನ ಮಾಡುವ ಯೋಜನೆಗೆ ರಷ್ಯಾ ಕೈಜೋಡಿಸಲಿದೆ ಎನ್ನಲಾಗಿದೆ. ಭಾರತೀಯ ಬಾಹ್ಯಾಕಾಶ ಸಂಶೋಧನಾ ಸಂಸ್ಥೆ ಹಾಗೂ ರಷ್ಯಾದ ರೋಸ್ಕೋಸ್ಮೊಸ್ ಸ್ಟೇಟ್ ಕಾರ್ಪೊರೇಷನ್ ಸಂಸ್ಥೆಗಳು ಬಾಹ್ಯಾಕಾಶ ಕಾರ್ಯಾಚರಣೆಯಲ್ಲಿ ಒಟ್ಟಾಗಿ ಕೆಲಸ ಮಾಡುವ ನಿರೀಕ್ಷೆ ಗರಿಗೆದರಿರುವ ಬಗ್ಗೆ ಮಾಧ್ಯಮಗಳು ವರದಿ ಮಾಡಿವೆ.
2022ರಲ್ಲಿ ಭಾರತ ಕೈಗೊಂಡಿರುವ ಮಾನವ ಸಹಿತ ಗಗನಯಾನ ಯೋಜನೆಗೆ ತರಬೇತಿಗೆಂದು ಭಾರತೀಯ ಗಗನಯಾತ್ರಿಗಳಿಗೆ ಇಂಟರ್ನ್ಯಾಷನಲ್ ಸ್ಪೇಸ್ ಸ್ಟೇಶನ್ (ಐಎಸ್ಎಸ್) ಗೆ ಭೇಟಿ ನೀಡಲು ರಷ್ಯಾ ಅವಕಾಶ ಕಲ್ಪಿಸಲಿದೆ ಎಂದು ಹೇಳಲಾಗಿದೆ. ಎರಡೂ ದೇಶಗಳು ಸದ್ಯದಲ್ಲೇ ಈ ಒಪ್ಪಂದಕ್ಕೆ ಸಹಿ ಹಾಕುವ ನಿರೀಕ್ಷೆಯನ್ನು ಹೊಂದಿರುವ ಬಗ್ಗೆ ರಷ್ಯಾದ ಸುದ್ದಿ ಸಂಸ್ಥೆ ಹೇಳಿದೆ.
19ನೇ ಇಂಡೋ-ರಷ್ಯನ್ ಶೃಂಗಸಭೆ ಹಿನ್ನಲೆಯಲ್ಲಿ ರಷ್ಯಾ ಅಧ್ಯಕ್ಷ ವ್ಲಾದಿಮಿರ್ ಪುಟಿನ್ ಅವರು ಭಾರತಕ್ಕೆ ಭೇಟಿ ನೀಡಿದ ಈ ವೇಳೆ ಪ್ರಧಾನಮಂತ್ರಿ ನರೇಂದ್ರ ಮೋದಿಯವರು ಮಹತ್ವದ ಮಾತುಕತೆ ನಡೆಸಲಿದ್ದಾರೆಂದು ಮೂಲಗಳು ತಿಳಿಸಿವೆ. ಹಾಗಾದರೆ, ಭಾರತದ ಮಹತ್ವಾಕಾಂಕ್ಷಿ ಮಾನವ ಸಹಿತ ಗಗನಯಾನ ಯೋಜನೆ ಹೇಗೆಲ್ಲಾ ಇರಲಿದೆ ಎಂಬುದನ್ನು ಮುಂದೆ ತಿಳಿಯಿರಿ.
ಭಾರತದ ಗಗನಯಾನ
ಮೋದಿ ಭಾಷಣದಲ್ಲಿ ಪ್ರಸ್ತಾಪಿಸಲ್ಪಟ್ಟ ಗಗನಯಾನ ಯೋಜನೆಯು ಇಸ್ರೋದ ಮಹತ್ವಾಕಾಂಕ್ಷೆ ಯೋಜನೆಯಾಗಿದ್ದು, ದೇಶದ 75ನೇ ಸ್ವಾತಂತ್ರ್ಯ ಸಂಭ್ರಮಕ್ಕೆ, ಅಂದರೆ ಇಷ್ಟು ದಿನ ಮಾನವ ರಹಿತ ಉಪಗ್ರಹಗಳನ್ನು ಉಡಾವಣೆ ಮಾಡಿ ಅನೇಕ ಮೈಲಿಗಲ್ಲುಗಳನ್ನು ನೆಟ್ಟಿರುವ ಇಸ್ರೋಗೆ ಈ ಗಗನಯಾನ ಪ್ರಮುಖವಾಗಿದೆ.
ವಿಶ್ವದ ನಾಲ್ಕನೇ ರಾಷ್ಟ್ರ
ಉದ್ದೇಶಿತ ಗಗನಯಾನ ಯೋಜನೆಯ ಮೂಲಕ ಭಾರತ ಮಾನವ ಸಹಿತ ಬಾಹ್ಯಾಕಾಶ ಯೋಜನೆಯನ್ನು ಯಶಸ್ವಿಗೊಳಿಸಿದರೆ ಈ ಸಾಧನೆ ಮಾಡಿದ ವಿಶ್ವದ ನಾಲ್ಕನೇ ರಾಷ್ಟ್ರವಾಗಲಿದೆ. ಇದಕ್ಕೂ ಮೊದಲು ಅಮೇರಿಕಾ ಸಂಯುಕ್ತ ಸಂಸ್ಥಾನ, ರಷ್ಯಾ ಹಾಗೂ ಚೀನಾ ದೇಶಗಳು ಮಾತ್ರ ಈ ಸಾಧನೆಯನ್ನು ಮಾಡಿವೆ.
ಪರೀಕ್ಷೆಯಲ್ಲಿ ಯಶಸ್ವಿ
ಮಾನವ ಸಹಿತ ಬಾಹ್ಯಾಕಾಶ ಯಾನ ಮಾಡಲು ಇಸ್ರೋ ಹೀಗಾಗಲೇ ಅನೇಕ ಪರೀಕ್ಷಾರ್ಥ ಪ್ರಯೋಗಗಳನ್ನು ಆರಂಭಿಸಿದ್ದು, ಕಳೆದ ತಿಂಗಳು ಪ್ಯಾಡ್ ಅಬಾರ್ಟ್ ಎಂಬ ಪರೀಕ್ಷೆಯನ್ನು ಯಶಸ್ವಿಯಾಗಿ ನಡೆಸಿದೆ. ಪ್ಯಾಡ್ ಅಬಾರ್ಟ್ ಅಥವಾ ಕ್ರೂ ಎಸ್ಕೇಪ್ ಸಿಸ್ಟಮ್ ತುರ್ತು ಪಾರಾಗುವ ವ್ಯವಸ್ಥೆಯಾಗಿದ್ದು, ಉಡಾವಣಾ ವಾಹನ ಕಾರ್ಯಾಚರಣೆಯನ್ನು ಸ್ಥಗಿತಗೊಳಿಸಿದಾಗ ಬಾಹ್ಯಾಕಾಶಯಾನಿಗಳು ಪಾರಾಗಲು ಇರುವ ಉತ್ತಮ ಮಾರ್ಗವಾಗಿದೆ.
9000 ಕೋಟಿ ರೂ. ಯೋಜನೆ
ಇಸ್ರೋ ಉದ್ದೇಶಿತ ಗಗನಯಾನ ಯೋಜನೆಗೆ 9000 ಕೋಟಿ ರೂ. ಖರ್ಚು ಮಾಡಲು ಉದ್ದೇಶಿಸಿದ್ದು, ಇದುವರೆಗೂ 173 ಕೋಟಿ ರೂ.ಗಳನ್ನು ಹ್ಯೂಮನ್ ಸ್ಪೇಸ್ ಪ್ಲೈಟ್ನಲ್ಲಿ ಸೂಕ್ಷ್ಮ ತಂತ್ರಜ್ಞಾನಗಳನ್ನು ಅಭಿವೃದ್ಧಿಪಡಿಸಲು ಖರ್ಚು ಮಾಡಿದ್ದು, ಯಶಸ್ವಿಯಾಗಿ ಗಗನಯಾನ ಮಾಡುವ ಉತ್ಸಾಹದಲ್ಲಿ ಇಸ್ರೋ ಇದೆ.
ಸ್ಫೂರ್ತಿಯಾದ ಚಂದ್ರಯಾನ - 1
ಇಸ್ರೋದ ಉದ್ದೇಶಿತ ಗಗನಯಾನಕ್ಕೆ ಚಂದ್ರಯಾನ -1 ರ ಯಶಸ್ಸು ಸ್ಫೂರ್ತಿಯಾಗಿದೆ. ಅಕ್ಟೋಬರ್ 2008ರಲ್ಲಿ ಚಂದ್ರಯಾನ -1 ಉಪಗ್ರಹ ಉಡಾವಣೆ ಮಾಡಲಾಯಿತು. ಅದು 2009ರ ಅಕ್ಟೋಬರ್ನಿಂದ ತನ್ನ ಕಾರ್ಯನಿರ್ವಹಣೆಯನ್ನು ಆರಂಭಿಸಿ ಸುಮಾರು ಒಂದು ವರ್ಷದ ಕಾಲ ಅನೇಕ ಅಂಶಗಳನ್ನು ಕಂಡುಹಿಡಿಯಲು ಸಹಾಯವಾಯಿತು. ಚಂದ್ರನ ಮೇಲೆ ನೀರಿರುವುದನ್ನು ಪತ್ತೆ ಹಚ್ಚಿದ ಚಂದ್ರಯಾನ- 1 ತನ್ನ ಉದ್ದೇಶಿತ ಕಾರ್ಯಯೋಜನೆಯ ಶೇ.95ರಷ್ಟು ಕಾರ್ಯವನ್ನು ಪೂರ್ಣಗೊಳಿಸಿದೆ.
ಗಗನಯಾನಕ್ಕೂ ಮುಂಚೆ ಚಂದ್ರಯಾನ -2
ಚಂದ್ರಯಾನ-1ರ ಯಶಸ್ವಿ ನಂತರ ಚಂದ್ರನ ಮೇಲ್ಮೈನ್ನು ಇನ್ನು ಹೆಚ್ಚಿನ ಅಧ್ಯಯನ ಮಾಡಲು ಇಸ್ರೋ ಚಂದ್ರಯಾನ-2 ಯೋಜನೆ ಕೈಗೆತ್ತಿಕೊಂಡಿದೆ. 2019ರ ಜನೇವರಿ ಮತ್ತು ಮಾರ್ಚ್ ನಡುವಿನ ಅವಧಿಯಲ್ಲಿ ಇಸ್ರೋ ಚಂದ್ರಯಾನ-2 ಉಡಾವಣೆ ಮಾಡಲಿದೆ. ಇದೇ ವರ್ಷ ಉಡಾವಣೆಯಾಗಬೇಕಿದ್ದ ಚಂದ್ರಯಾನ-2 ಚಂದ್ರನ ಮೇಲೆ ಸುರಕ್ಷಿತವಾಗಿ ಲ್ಯಾಂಡ್ ಆಗಲಿ ಎಂದು ಸ್ಪೇಸ್ಕ್ರಾಫ್ಟ್ನಲ್ಲಿ ಅನೇಕ ಬದಲಾವಣೆ ತರುತ್ತಿರುವುದರಿಂದ ಮುಂದಿನ ವರ್ಷಕ್ಕೆ ಮುಂದೂಡಲ್ಪಟ್ಟಿದೆ.
ಅಂಗಾರಕನ ಅಂಗಳಕ್ಕೂ ಹೋಗಿ ಬಂದ ಇಸ್ರೋ
ಇಸ್ರೋ ಚಂದ್ರಯಾನದ ನಂತರ ಮಂಗಳಯಾನವನ್ನು ಸಹ ಮಾಡಿದ್ದು, ಮಾರ್ಸ್ ಆರ್ಬಿಟರ್ ಮಿಷನ್ ಅಥವಾ ಮಂಗಳಯಾನ ಯೋಜನೆಯನ್ನು ಯಶಸ್ವಿಯಾಗಿ ಅನುಷ್ಟಾನಗೊಳಿಸಿದ ಇಸ್ರೋ ಬಾಹ್ಯಾಕಾಶ ಲೋಕದಲ್ಲಿ ಹೊಸ ಕ್ರಾಂತಿಯನ್ನು ಉಂಟು ಮಾಡಿತು. ನವೆಂಬರ್ 05, 2013ರಲ್ಲಿ ಮಂಗಳಯಾನ ಯೋಜನೆಗೆ ರಾಕೆಟ್ ಉಡಾವಣೆ ಮಾಡಲಾಯಿತು.
ಮೈಸೂರಿನ ಇಡ್ಲಿ-ಸಾಂಬರ್
ಭಾರತೀಯ ಗಗನಯಾತ್ರಿಗಳು ಬಾಹ್ಯಾಕಾಶದಲ್ಲಿ ಮೈಸೂರಿನಲ್ಲಿ ತಯಾರಾಗುವ ಇಡ್ಲಿ-ಸಾಂಬರ್ ಸವಿಯಲಿದ್ದಾರೆ. ಬಾಹ್ಯಾಕಾಶದಲ್ಲಿ ಗಗನಯಾತ್ರಿಗಳ ಉಪಾಹಾರ ಸೇವನೆಯ ಮ್ಯಾಜಿಕ್ಗೆ ರಕ್ಷಣಾ ಇಲಾಖೆಯ ಸಂಶೋಧನಾ ಪ್ರಯೋಗಾಲಯ(ಡಿಎಫ್ಆರ್ಎಲ್) ಪ್ರಮುಖ ಪಾತ್ರ ವಹಿಸುತ್ತಿದೆ. ಇಡ್ಲಿ-ಸಾಂಬರ್, ಶೈತ್ಯೀಕರಿಸಿದ ಹಣ್ಣಿನ ಜ್ಯೂಸ್ ,ಮಾವಿನ ಹಣ್ಣಿನ ರಸ ಮತ್ತು ಮತ್ತಿತರ ಆಹಾರ ಪದಾರ್ಥಗಳನ್ನು ಸೂಕ್ತ ರೀತಿಯಲ್ಲಿ ಪ್ಯಾಕ್ ಮಾಡಿ ಪೂರೈಸುವ ಬಗ್ಗೆ ಡಿಎಫ್ಆರ್ಎಲ್ ಜೊತೆ ಇಸ್ರೋ ಮಾತುಕತೆ ನಡೆಸಿದೆ.
ಡಿಎಫ್ಆರ್ಎಲ್ ವಿಶೇಷತೆ.!
ಆಹಾರ ಪದಾರ್ಥಗಳನ್ನು ಸೂಕ್ತ ರೀತಿಯಲ್ಲಿ ಪ್ಯಾಕ್ ಮಾಡಿ ಪೂರೈಸುವ ಬಗ್ಗೆ ಡಿಎಫ್ಆರ್ಎಲ್ ಜೊತೆ ಇಸ್ರೋ ಮಾತುಕತೆ ನಡೆಸಿದರುವ ಸುದ್ದಿ ಅಷ್ಟೇನು ವಿಶೇಷವಾಗಿ ತೆಗೆದುಕೊಳ್ಳಬೇಕಿಲ್ಲ.! ಏಕೆಂದರೆ, ಡಿಎಫ್ಆರ್ಎಲ್ 1984ರಲ್ಲೇ ರಷ್ಯಾದ ಸೊಯುಜ್ ಟಿ-11 ಅಂತರಿಕ್ಷ ಯೋಜನೆ ಕೈಗೊಂಡ ವೇಳೆ ಗಗನಯಾತ್ರಿಗಳಿಗೆ ಆಹಾರ ಪೂರೈಸಿತ್ತು.!
-
1,29,999
-
22,999
-
64,999
-
99,999
-
29,999
-
39,999
-
-
63,999
-
1,56,900
-
96,949
-
1,39,900
-
1,29,900
-
79,900
-
65,900
-
12,999
-
96,949
-
16,499
-
38,999
-
30,700
-
49,999
-
19,999
-
17,970
-
21,999
-
13,474
-
18,999
-
22,999
-
19,999
-
17,999
-
26,999
-
5,999